ದೊಡ್ಡಬಳ್ಳಾಪುರ : ಪ್ರದೀಪ್ ಈಶ್ವರ್ ಮೊದಲ ಬಾರಿಗೆ ಶಾಸಕರಾಗಿದ್ದು, ಎರಡನೇ ಹುಚ್ಚ ವೆಂಕಟ್ ರೀತಿ ಆಡುತ್ತಿದ್ದಾರೆ. ಇಂಥ ಡ್ರಾಮಾ ಕಂಪನಿಗಳನ್ನು ತುಂಬಾ ನೋಡಿದ್ದೇನೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಕಿಡಿಕಾರಿದ್ದಾರೆ. ಈ ಮೂಲಕ ತಮ್ಮನ್ನು ಚೈಲ್ಡ್ ಆರ್ಟಿಸ್ಟ್ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ಗೆ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕರ್ತರ ಸಭೆಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು 2002ರಿಂದಲೂ ರಾಜಕೀಯದಲ್ಲಿದ್ದೇನೆ, ಪ್ರದೀಪ್ ಈಶ್ವರ್ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ರಾಜಕೀಯ ಮೆಚ್ಯುರಿಟಿಗಾಗಿ ನನ್ನ ಬಳಿ ಟ್ಯೂಶನ್ಗೆ ಬರಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
ನಾನು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಂಸದ ಚುನಾವಣೆವರೆಗೂ ಫೇಸ್ ಮಾಡಿದ್ದೇನೆ. ಪ್ರದೀಪ್ ಈಶ್ವರ್ನಂತಹ ರಾಜಕೀಯ ಅನನುಭವಿಯಿಂದ ನನಗೆ ಕಲಿಯೋದು ಏನಿದೆ? ಅವನೊಬ್ಬ ಎರಡನೇ ಹುಚ್ಚ ವೆಂಕಟ್, ಲಬಾ ಲಬಾ ಅಂತ ಬಾಯಿ ಬಡ್ಕೋತಾನೆ. ಮಕ್ಕಳಿಗೆ ಪಾಠ ಮಾಡಿ ಬಾಯಿ ಬಡ್ಕೋಳೋದಲ್ಲ, ನನ್ನತ್ರ ಟ್ಯೂಷನ್ಗೆ ಬರಲಿ ಎಂದು ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಚೈಲ್ಡ್ ಆರ್ಟಿಸ್ಟ್ ಎಂದಿದ್ದ ಪ್ರದೀಪ್ ಈಶ್ವರ್ : ಶುಕ್ರವಾರ ಬಿಜೆಪಿ ಸಂಸದ ಮುನಿಸ್ವಾಮಿ ವಿರುದ್ಧ ಕಿಡಿಕಾರಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ಸಂಸದ ಮುನಿಸ್ವಾಮಿ ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದಂಗೆ. ಮುನಿಸ್ವಾಮಿ ಅಲ್ಲ ಅವರು ‘ಮನಿ’ಸ್ವಾಮಿ ಎಂದು ವ್ಯಂಗ್ಯವಾಡಿದ್ದಾರೆ. ನಾನು ಅವರನ್ನು ಮುನಿಸ್ವಾಮಿ ಎಂದುಕೊಂಡಿದ್ದೆ. ‘ಮನಿ’ಸ್ವಾಮಿ ಎಂಬುದು ಈಗ ಗೊತ್ತಾಯಿತು. ಚಿಂತಾಮಣಿ ಹಾಗೂ ಕೋಲಾರದ ಪ್ರಭಾವಿ ನಾಯಕರು ಮನಸ್ಸು ಮಾಡಿಲ್ಲದಿದ್ದರೆ ಅವರು ಹೇಗೆ ಸಂಸದರಾಗುತ್ತಿದ್ದರು ಎಂದು ಪ್ರಶ್ನಿಸಿದರು. ಅವರು ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದಂತೆ. ಒಬ್ಬ ಸಂಸದ ಹೇಗೆ ಇರಬೇಕು ಎನ್ನುವುದು ಗೊತ್ತಿಲ್ಲ. ಮುನಿಸ್ವಾಮಣ್ಣ ನನಗೆ ಇನ್ನು 5 ವರ್ಷಕ್ಕೆ ಇರೋದು ಹಬ್ಬ. ನಿಮಗೆ ಮುಂದಿನ ವರ್ಷವೇ ಇದೆ ಹಬ್ಬ. ನೋಡೇ ಬಿಡೋಣ,’’ ಎಂದು ಸವಾಲು ಹಾಕಿದ್ದರು.
ಪ್ರತಾಪ್ ಸಿಂಹ ವಿರುದ್ಧವೂ ಕಿಡಿಕಾರಿದ್ದ ಶಾಸಕ : ಮಾನ್ಯ ಪ್ರತಾಪ್ ಸಿಂಹ ಅವರೇ, ನೀವು ಪತ್ರಕರ್ತರಾಗಿದ್ದಾಗ ಸ್ವಲ ಓದುತ್ತಿದ್ದೀರಿ. ಸಂಸದರಾದ ಮೇಲೆ ಓದೋದು ಬಿಟ್ಟು ಬಿಟ್ಟಿದ್ದೀರಿ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಒಂದು ಗೋಡೌನ್ ಇದ್ದಂಗೆ ಎಂದು ಹೇಳ್ತಿರಲ್ಲ, ನಿಮಗೇನಾದರೂ ತಲೆಗಿಲೆ ಕೆಟ್ಟಿದೆಯಾ? ತಾಕತ್ತಿದ್ದರೆ ಎಫ್ಸಿಐ ಬಗ್ಗೆ ಚರ್ಚೆಗೆ ಬನ್ನಿ ಎಂದು ಪ್ರದೀಪ್ ಈಶ್ವರ್ ಸಂಸದ ಪ್ರತಾಪ್ ಸಿಂಹಗೆ ಸವಾಲು ಹಾಕಿದ್ದರು.
ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…
ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…