BREAKING NEWS

ಪ್ರದೀಪ್‌ ಈಶ್ವರ್‌ ಎರಡನೇ ಹುಚ್ಚ ವೆಂಕಟ್‌ ರಾಜಕೀಯ ಪ್ರಬುದ್ಧತೆ ಇಲ್ಲ : ಮುನಿಸ್ವಾಮಿ

ದೊಡ್ಡಬಳ್ಳಾಪುರ : ಪ್ರದೀಪ್‌ ಈಶ್ವರ್‌ ಮೊದಲ ಬಾರಿಗೆ ಶಾಸಕರಾಗಿದ್ದು, ಎರಡನೇ ಹುಚ್ಚ ವೆಂಕಟ್‌ ರೀತಿ ಆಡುತ್ತಿದ್ದಾರೆ. ಇಂಥ ಡ್ರಾಮಾ ಕಂಪನಿಗಳನ್ನು ತುಂಬಾ ನೋಡಿದ್ದೇನೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಕಿಡಿಕಾರಿದ್ದಾರೆ. ಈ ಮೂಲಕ ತಮ್ಮನ್ನು ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ಗೆ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕರ್ತರ ಸಭೆಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು 2002ರಿಂದಲೂ ರಾಜಕೀಯದಲ್ಲಿದ್ದೇನೆ, ಪ್ರದೀಪ್‌ ಈಶ್ವರ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ರಾಜಕೀಯ ಮೆಚ್ಯುರಿಟಿಗಾಗಿ ನನ್ನ ಬಳಿ ಟ್ಯೂಶನ್‌ಗೆ ಬರಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಂಸದ ಚುನಾವಣೆವರೆಗೂ ಫೇಸ್ ಮಾಡಿದ್ದೇನೆ. ಪ್ರದೀಪ್‌ ಈಶ್ವರ್‌ನಂತಹ ರಾಜಕೀಯ ಅನನುಭವಿಯಿಂದ ನನಗೆ ಕಲಿಯೋದು ಏನಿದೆ? ಅವನೊಬ್ಬ ಎರಡನೇ‌ ಹುಚ್ಚ ವೆಂಕಟ್, ಲಬಾ ಲಬಾ ಅಂತ ಬಾಯಿ‌ ಬಡ್ಕೋತಾನೆ. ಮಕ್ಕಳಿಗೆ ಪಾಠ ಮಾಡಿ ಬಾಯಿ‌ ಬಡ್ಕೋಳೋದಲ್ಲ, ನನ್ನತ್ರ ಟ್ಯೂಷನ್‌ಗೆ ಬರಲಿ ಎಂದು ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಪ್ರದೀಪ್‌ ಈಶ್ವರ್‌ : ಶುಕ್ರವಾರ ಬಿಜೆಪಿ ಸಂಸದ ಮುನಿಸ್ವಾಮಿ ವಿರುದ್ಧ ಕಿಡಿಕಾರಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌, ಬಿಜೆಪಿ ಸಂಸದ ಮುನಿಸ್ವಾಮಿ ಒಂದು ರೀತಿ ಚೈಲ್ಡ್‌ ಆರ್ಟಿಸ್ಟ್‌ ಇದ್ದಂಗೆ. ಮುನಿಸ್ವಾಮಿ ಅಲ್ಲ ಅವರು ‘ಮನಿ’ಸ್ವಾಮಿ ಎಂದು ವ್ಯಂಗ್ಯವಾಡಿದ್ದಾರೆ. ನಾನು ಅವರನ್ನು ಮುನಿಸ್ವಾಮಿ ಎಂದುಕೊಂಡಿದ್ದೆ. ‘ಮನಿ’ಸ್ವಾಮಿ ಎಂಬುದು ಈಗ ಗೊತ್ತಾಯಿತು. ಚಿಂತಾಮಣಿ ಹಾಗೂ ಕೋಲಾರದ ಪ್ರಭಾವಿ ನಾಯಕರು ಮನಸ್ಸು ಮಾಡಿಲ್ಲದಿದ್ದರೆ ಅವರು ಹೇಗೆ ಸಂಸದರಾಗುತ್ತಿದ್ದರು ಎಂದು ಪ್ರಶ್ನಿಸಿದರು. ಅವರು ಒಂದು ರೀತಿ ಚೈಲ್ಡ್‌ ಆರ್ಟಿಸ್ಟ್‌ ಇದ್ದಂತೆ. ಒಬ್ಬ ಸಂಸದ ಹೇಗೆ ಇರಬೇಕು ಎನ್ನುವುದು ಗೊತ್ತಿಲ್ಲ. ಮುನಿಸ್ವಾಮಣ್ಣ ನನಗೆ ಇನ್ನು 5 ವರ್ಷಕ್ಕೆ ಇರೋದು ಹಬ್ಬ. ನಿಮಗೆ ಮುಂದಿನ ವರ್ಷವೇ ಇದೆ ಹಬ್ಬ. ನೋಡೇ ಬಿಡೋಣ,’’ ಎಂದು ಸವಾಲು ಹಾಕಿದ್ದರು.

ಪ್ರತಾಪ್‌ ಸಿಂಹ ವಿರುದ್ಧವೂ ಕಿಡಿಕಾರಿದ್ದ ಶಾಸಕ : ಮಾನ್ಯ ಪ್ರತಾಪ್‌ ಸಿಂಹ ಅವರೇ, ನೀವು ಪತ್ರಕರ್ತರಾಗಿದ್ದಾಗ ಸ್ವಲ ಓದುತ್ತಿದ್ದೀರಿ. ಸಂಸದರಾದ ಮೇಲೆ ಓದೋದು ಬಿಟ್ಟು ಬಿಟ್ಟಿದ್ದೀರಿ. ಫುಡ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ ಒಂದು ಗೋಡೌನ್‌ ಇದ್ದಂಗೆ ಎಂದು ಹೇಳ್ತಿರಲ್ಲ, ನಿಮಗೇನಾದರೂ ತಲೆಗಿಲೆ ಕೆಟ್ಟಿದೆಯಾ? ತಾಕತ್ತಿದ್ದರೆ ಎಫ್‌ಸಿಐ ಬಗ್ಗೆ ಚರ್ಚೆಗೆ ಬನ್ನಿ ಎಂದು ಪ್ರದೀಪ್‌ ಈಶ್ವರ್‌ ಸಂಸದ ಪ್ರತಾಪ್‌ ಸಿಂಹಗೆ ಸವಾಲು ಹಾಕಿದ್ದರು.

lokesh

Recent Posts

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

11 mins ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

28 mins ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

1 hour ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

4 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

4 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

5 hours ago