BREAKING NEWS

ಪ್ರದೀಪ್‌ ಈಶ್ವರ್‌ ಎರಡನೇ ಹುಚ್ಚ ವೆಂಕಟ್‌ ರಾಜಕೀಯ ಪ್ರಬುದ್ಧತೆ ಇಲ್ಲ : ಮುನಿಸ್ವಾಮಿ

ದೊಡ್ಡಬಳ್ಳಾಪುರ : ಪ್ರದೀಪ್‌ ಈಶ್ವರ್‌ ಮೊದಲ ಬಾರಿಗೆ ಶಾಸಕರಾಗಿದ್ದು, ಎರಡನೇ ಹುಚ್ಚ ವೆಂಕಟ್‌ ರೀತಿ ಆಡುತ್ತಿದ್ದಾರೆ. ಇಂಥ ಡ್ರಾಮಾ ಕಂಪನಿಗಳನ್ನು ತುಂಬಾ ನೋಡಿದ್ದೇನೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಕಿಡಿಕಾರಿದ್ದಾರೆ. ಈ ಮೂಲಕ ತಮ್ಮನ್ನು ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ಗೆ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕರ್ತರ ಸಭೆಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು 2002ರಿಂದಲೂ ರಾಜಕೀಯದಲ್ಲಿದ್ದೇನೆ, ಪ್ರದೀಪ್‌ ಈಶ್ವರ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ರಾಜಕೀಯ ಮೆಚ್ಯುರಿಟಿಗಾಗಿ ನನ್ನ ಬಳಿ ಟ್ಯೂಶನ್‌ಗೆ ಬರಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಂಸದ ಚುನಾವಣೆವರೆಗೂ ಫೇಸ್ ಮಾಡಿದ್ದೇನೆ. ಪ್ರದೀಪ್‌ ಈಶ್ವರ್‌ನಂತಹ ರಾಜಕೀಯ ಅನನುಭವಿಯಿಂದ ನನಗೆ ಕಲಿಯೋದು ಏನಿದೆ? ಅವನೊಬ್ಬ ಎರಡನೇ‌ ಹುಚ್ಚ ವೆಂಕಟ್, ಲಬಾ ಲಬಾ ಅಂತ ಬಾಯಿ‌ ಬಡ್ಕೋತಾನೆ. ಮಕ್ಕಳಿಗೆ ಪಾಠ ಮಾಡಿ ಬಾಯಿ‌ ಬಡ್ಕೋಳೋದಲ್ಲ, ನನ್ನತ್ರ ಟ್ಯೂಷನ್‌ಗೆ ಬರಲಿ ಎಂದು ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಪ್ರದೀಪ್‌ ಈಶ್ವರ್‌ : ಶುಕ್ರವಾರ ಬಿಜೆಪಿ ಸಂಸದ ಮುನಿಸ್ವಾಮಿ ವಿರುದ್ಧ ಕಿಡಿಕಾರಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌, ಬಿಜೆಪಿ ಸಂಸದ ಮುನಿಸ್ವಾಮಿ ಒಂದು ರೀತಿ ಚೈಲ್ಡ್‌ ಆರ್ಟಿಸ್ಟ್‌ ಇದ್ದಂಗೆ. ಮುನಿಸ್ವಾಮಿ ಅಲ್ಲ ಅವರು ‘ಮನಿ’ಸ್ವಾಮಿ ಎಂದು ವ್ಯಂಗ್ಯವಾಡಿದ್ದಾರೆ. ನಾನು ಅವರನ್ನು ಮುನಿಸ್ವಾಮಿ ಎಂದುಕೊಂಡಿದ್ದೆ. ‘ಮನಿ’ಸ್ವಾಮಿ ಎಂಬುದು ಈಗ ಗೊತ್ತಾಯಿತು. ಚಿಂತಾಮಣಿ ಹಾಗೂ ಕೋಲಾರದ ಪ್ರಭಾವಿ ನಾಯಕರು ಮನಸ್ಸು ಮಾಡಿಲ್ಲದಿದ್ದರೆ ಅವರು ಹೇಗೆ ಸಂಸದರಾಗುತ್ತಿದ್ದರು ಎಂದು ಪ್ರಶ್ನಿಸಿದರು. ಅವರು ಒಂದು ರೀತಿ ಚೈಲ್ಡ್‌ ಆರ್ಟಿಸ್ಟ್‌ ಇದ್ದಂತೆ. ಒಬ್ಬ ಸಂಸದ ಹೇಗೆ ಇರಬೇಕು ಎನ್ನುವುದು ಗೊತ್ತಿಲ್ಲ. ಮುನಿಸ್ವಾಮಣ್ಣ ನನಗೆ ಇನ್ನು 5 ವರ್ಷಕ್ಕೆ ಇರೋದು ಹಬ್ಬ. ನಿಮಗೆ ಮುಂದಿನ ವರ್ಷವೇ ಇದೆ ಹಬ್ಬ. ನೋಡೇ ಬಿಡೋಣ,’’ ಎಂದು ಸವಾಲು ಹಾಕಿದ್ದರು.

ಪ್ರತಾಪ್‌ ಸಿಂಹ ವಿರುದ್ಧವೂ ಕಿಡಿಕಾರಿದ್ದ ಶಾಸಕ : ಮಾನ್ಯ ಪ್ರತಾಪ್‌ ಸಿಂಹ ಅವರೇ, ನೀವು ಪತ್ರಕರ್ತರಾಗಿದ್ದಾಗ ಸ್ವಲ ಓದುತ್ತಿದ್ದೀರಿ. ಸಂಸದರಾದ ಮೇಲೆ ಓದೋದು ಬಿಟ್ಟು ಬಿಟ್ಟಿದ್ದೀರಿ. ಫುಡ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ ಒಂದು ಗೋಡೌನ್‌ ಇದ್ದಂಗೆ ಎಂದು ಹೇಳ್ತಿರಲ್ಲ, ನಿಮಗೇನಾದರೂ ತಲೆಗಿಲೆ ಕೆಟ್ಟಿದೆಯಾ? ತಾಕತ್ತಿದ್ದರೆ ಎಫ್‌ಸಿಐ ಬಗ್ಗೆ ಚರ್ಚೆಗೆ ಬನ್ನಿ ಎಂದು ಪ್ರದೀಪ್‌ ಈಶ್ವರ್‌ ಸಂಸದ ಪ್ರತಾಪ್‌ ಸಿಂಹಗೆ ಸವಾಲು ಹಾಕಿದ್ದರು.

lokesh

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago