BREAKING NEWS

Prajwal Revanna: ಪ್ರಜ್ವಲ್ ರೇವಣ್ಣ ವಶಕ್ಕೆ ಪಡೆದ ಎಸ್ಐಟಿ

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ವಾಪಸ್ ಆಗಿದ್ದು, ಬೆಂಗಳೂರಿನ ದೇವನಹಳ್ಳಿ ಸಮೀಪದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ‌.

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆ ದಿನ ( ಏಪ್ರಿಲ್ 26 ) ಮತ ಚಲಾಯಿಸಿದ ಬಳಿಕ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಹಲವು ಬಾರಿ ಭಾರತಕ್ಕೆ ಮರಳುವ ಟಿಕೆಟ್ ಬುಕ್ ಮಾಡಿ ಕೊನೆ ಕ್ಷಣದಲ್ಲಿ ವಿಮಾನ ಹತ್ತದೇ ಕಣ್ಣಾ ಮುಚ್ಚಾಲೆ ಆಟವನ್ನಾಡಿ ಇದೀಗ ಕೊನೆಗೂ ಎಲ್‌ಹೆಚ್ 784 ವಿಮಾನದ ಜಿ8 ಸೀಟ್‌ನಲ್ಲಿ ಕುಳಿತು ಜರ್ಮನ್‌ನ ಮ್ಯೂನಿಕ್‌ನಿಂದ ಬೆಂಗಳೂರಿಗೆ ಮಧ್ಯರಾತ್ರಿ ಸುಮಾರು 12.48ರ ಸಮಯಕ್ಕೆ ಬಂದಿಳಿದಿದ್ದು, ಪ್ರಜ್ವಲ್ ಮೇಲೆ ಲುಕ್ಔಟ್ ನೋಟಿಸ್ ಇದ್ದದ್ದರಿಂದ ಇಮಿಗ್ರೇಷನ್ ಅಧಿಕಾರಿಗಳು ಮೊದಲು ವಶಕ್ಕೆ ಪಡೆದು ನಂತರ ಎಸ್ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

ಶರಣಾಗಿರುವ ಪ್ರಜ್ವಲ್ ಅವರನ್ನು ಎಸ್ಐಟಿ ಅಧಿಕಾರಿಗಳು ಬೆಳಗ್ಗೆ ಆರೋಗ್ಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದು, ನಂತರ ತಮ್ಮ ವಶಕ್ಕೆ ಕೇಳಲಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

54 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

60 mins ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

1 hour ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

1 hour ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

7 hours ago