ಬೆಂಗಳೂರು : ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಅರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ.
ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಕೆ.ನಟರಾಜನ್ ಅವರು ಆದೇಶ ಪ್ರಕಟಿಸಿದ್ದಾರೆ. ಈ ಆದೇಶದಿಂದ ಇನ್ನು 6 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ.
2019ರ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ ವಕೀಲ ದೇವರಾಜೇಗೌಡ ಹೈ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…