BREAKING NEWS

ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹ : ಹೈಕೋರ್ಟ್‌ ಆದೇಶ

ಬೆಂಗಳೂರು : ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಅರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಹೈಕೋರ್ಟ್‌ ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ.

ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಕೆ.ನಟರಾಜನ್ ಅವರು ಆದೇಶ ಪ್ರಕಟಿಸಿದ್ದಾರೆ. ಈ ಆದೇಶದಿಂದ ಇನ್ನು 6 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ.

2019ರ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ  ವಕೀಲ ದೇವರಾಜೇಗೌಡ ಹೈ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್‌ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.

lokesh

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

23 mins ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

1 hour ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

7 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

7 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

7 hours ago