ಬೆಂಗಳೂರು : ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಅರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ.
ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಕೆ.ನಟರಾಜನ್ ಅವರು ಆದೇಶ ಪ್ರಕಟಿಸಿದ್ದಾರೆ. ಈ ಆದೇಶದಿಂದ ಇನ್ನು 6 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ.
2019ರ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ ವಕೀಲ ದೇವರಾಜೇಗೌಡ ಹೈ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…