BREAKING NEWS

ಪ್ರಕಾಶ್​​ ರಾಜ್​ ವಿಕೃತ ಮನುಷ್ಯ : ಆರ್ ಅಶೋಕ್​​​​ ವಾಗ್ದಾಳಿ

ಬೆಂಗಳೂರು : ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ಚಂದ್ರಯಾನ-3 ವಿಚಾರವಾಗಿ ನಟ ಪ್ರಕಾಶ್​​ ರಾಜ್ ಮಾಡಿದ ಕಾರ್ಟೂನ್​​ ಟ್ವೀಟ್​​ ದೇಶವ್ಯಾಪಿ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರಕಾಶ್​​ ರಾಜ್​ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಕುರಿತು ಬಿಜೆಪಿ ಶಾಸಕ ಆರ್​ ಅಶೋಕ್​ ಮಾತನಾಡಿ ಪ್ರಕಾಶ್ ರೈ ಒಬ್ಬ ವಿಕೃತ ಮನುಷ್ಯ. ನಾನು ಕೂಡ ಕಾರ್ಟೂನ್ ನೋಡಿದ್ದೇನೆ. ಟೀ ಮಾರುವ ಮೂಲಕ ವಿಜ್ಞಾನಿಗಳನ್ನು ಟೀಕೆ ಮಾಡುವುದನ್ನು ನೋಡಿದರೇ ಇದು ಕೀಳು ಪ್ರವೃತ್ತಿ ಅನಿಸುತ್ತೆ ಎಂದು ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾಕಷ್ಟು ಕಲಾವಿದರನ್ನು ನೋಡಿದ್ದೇನೆ. ಇತನೂ ಸಹ ಕಲಾವಿದ. ಆದರೆ ಡಾ.ರಾಜಕುಮಾರ್ ಹಾಗೂ ರಜನಿಕಾಂತ್ ಅವರೆಲ್ಲಾ ಉತ್ತಮ ಕಲಾವಿದರು. ಆದರೆ ಇವರನ್ನು ಕಲಾವಿದ ಅಂತ ಕರೆಯೋಕೆ ಆಗಲ್ಲ. ಸಿನಿಮಾ ರೀತಿಯಲ್ಲೇ ನಿಜ ಜೀವನದಲ್ಲೂ ಪ್ರಕಾಶ್ ರೈ ವಿಲನ್ ಆಗಿದ್ದಾನೆ ಎಂದು ವಾಗ್ದಾಳಿ ಮಾಡಿದರು.

ಇನ್ನು ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಸರ್ಕಾರ ಸರ್ವ ಪಕ್ಷ ಸಭೆ ಕರೆದ ವಿಚಾರವಾಗಿ ಮಾತನಾಡಿದ ಅವರು ಕೊನೆಗೂ ಸಭೆ ಕರೆದಿದ್ದಾರೆ. ಸ್ಟಾಲಿನ್ ಜೊತೆಗೆ ಒಳ ಒಪ್ಪಂದ ಇದು. ನೀರು ಬಿಟ್ಟ ಮೇಲೆ ಸಭೆ ಕರೆದಿದ್ದಾರೆ. ಮೇಕೆ ದಾಟು ವಿಚಾರವಾಗಿ ಪ್ರತಿಭಟನೆ ಮಾಡಿದರು. ಅಧಿಕಾರ ಬಂದ ಮೇಲೆ ಕಾವೇರಿನೂ ಇಲ್ಲ ಮೇಕೆದಾಟು ಇಲ್ಲ. ಸರ್ಕಾರ ನೀರು ಬಿಟ್ಟು ಕರ್ನಾಟಕದ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಗರಂ ಆದರು.

lokesh

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

7 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

12 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

12 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

12 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

12 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

13 hours ago