ಬೆಂಗಳೂರು : ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ಚಂದ್ರಯಾನ-3 ವಿಚಾರವಾಗಿ ನಟ ಪ್ರಕಾಶ್ ರಾಜ್ ಮಾಡಿದ ಕಾರ್ಟೂನ್ ಟ್ವೀಟ್ ದೇಶವ್ಯಾಪಿ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರಕಾಶ್ ರಾಜ್ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಕುರಿತು ಬಿಜೆಪಿ ಶಾಸಕ ಆರ್ ಅಶೋಕ್ ಮಾತನಾಡಿ ಪ್ರಕಾಶ್ ರೈ ಒಬ್ಬ ವಿಕೃತ ಮನುಷ್ಯ. ನಾನು ಕೂಡ ಕಾರ್ಟೂನ್ ನೋಡಿದ್ದೇನೆ. ಟೀ ಮಾರುವ ಮೂಲಕ ವಿಜ್ಞಾನಿಗಳನ್ನು ಟೀಕೆ ಮಾಡುವುದನ್ನು ನೋಡಿದರೇ ಇದು ಕೀಳು ಪ್ರವೃತ್ತಿ ಅನಿಸುತ್ತೆ ಎಂದು ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾಕಷ್ಟು ಕಲಾವಿದರನ್ನು ನೋಡಿದ್ದೇನೆ. ಇತನೂ ಸಹ ಕಲಾವಿದ. ಆದರೆ ಡಾ.ರಾಜಕುಮಾರ್ ಹಾಗೂ ರಜನಿಕಾಂತ್ ಅವರೆಲ್ಲಾ ಉತ್ತಮ ಕಲಾವಿದರು. ಆದರೆ ಇವರನ್ನು ಕಲಾವಿದ ಅಂತ ಕರೆಯೋಕೆ ಆಗಲ್ಲ. ಸಿನಿಮಾ ರೀತಿಯಲ್ಲೇ ನಿಜ ಜೀವನದಲ್ಲೂ ಪ್ರಕಾಶ್ ರೈ ವಿಲನ್ ಆಗಿದ್ದಾನೆ ಎಂದು ವಾಗ್ದಾಳಿ ಮಾಡಿದರು.
ಇನ್ನು ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಸರ್ಕಾರ ಸರ್ವ ಪಕ್ಷ ಸಭೆ ಕರೆದ ವಿಚಾರವಾಗಿ ಮಾತನಾಡಿದ ಅವರು ಕೊನೆಗೂ ಸಭೆ ಕರೆದಿದ್ದಾರೆ. ಸ್ಟಾಲಿನ್ ಜೊತೆಗೆ ಒಳ ಒಪ್ಪಂದ ಇದು. ನೀರು ಬಿಟ್ಟ ಮೇಲೆ ಸಭೆ ಕರೆದಿದ್ದಾರೆ. ಮೇಕೆ ದಾಟು ವಿಚಾರವಾಗಿ ಪ್ರತಿಭಟನೆ ಮಾಡಿದರು. ಅಧಿಕಾರ ಬಂದ ಮೇಲೆ ಕಾವೇರಿನೂ ಇಲ್ಲ ಮೇಕೆದಾಟು ಇಲ್ಲ. ಸರ್ಕಾರ ನೀರು ಬಿಟ್ಟು ಕರ್ನಾಟಕದ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಗರಂ ಆದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…