ಬೆಂಗಳೂರು : ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ಚಂದ್ರಯಾನ-3 ವಿಚಾರವಾಗಿ ನಟ ಪ್ರಕಾಶ್ ರಾಜ್ ಮಾಡಿದ ಕಾರ್ಟೂನ್ ಟ್ವೀಟ್ ದೇಶವ್ಯಾಪಿ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರಕಾಶ್ ರಾಜ್ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಕುರಿತು ಬಿಜೆಪಿ ಶಾಸಕ ಆರ್ ಅಶೋಕ್ ಮಾತನಾಡಿ ಪ್ರಕಾಶ್ ರೈ ಒಬ್ಬ ವಿಕೃತ ಮನುಷ್ಯ. ನಾನು ಕೂಡ ಕಾರ್ಟೂನ್ ನೋಡಿದ್ದೇನೆ. ಟೀ ಮಾರುವ ಮೂಲಕ ವಿಜ್ಞಾನಿಗಳನ್ನು ಟೀಕೆ ಮಾಡುವುದನ್ನು ನೋಡಿದರೇ ಇದು ಕೀಳು ಪ್ರವೃತ್ತಿ ಅನಿಸುತ್ತೆ ಎಂದು ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾಕಷ್ಟು ಕಲಾವಿದರನ್ನು ನೋಡಿದ್ದೇನೆ. ಇತನೂ ಸಹ ಕಲಾವಿದ. ಆದರೆ ಡಾ.ರಾಜಕುಮಾರ್ ಹಾಗೂ ರಜನಿಕಾಂತ್ ಅವರೆಲ್ಲಾ ಉತ್ತಮ ಕಲಾವಿದರು. ಆದರೆ ಇವರನ್ನು ಕಲಾವಿದ ಅಂತ ಕರೆಯೋಕೆ ಆಗಲ್ಲ. ಸಿನಿಮಾ ರೀತಿಯಲ್ಲೇ ನಿಜ ಜೀವನದಲ್ಲೂ ಪ್ರಕಾಶ್ ರೈ ವಿಲನ್ ಆಗಿದ್ದಾನೆ ಎಂದು ವಾಗ್ದಾಳಿ ಮಾಡಿದರು.
ಇನ್ನು ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಸರ್ಕಾರ ಸರ್ವ ಪಕ್ಷ ಸಭೆ ಕರೆದ ವಿಚಾರವಾಗಿ ಮಾತನಾಡಿದ ಅವರು ಕೊನೆಗೂ ಸಭೆ ಕರೆದಿದ್ದಾರೆ. ಸ್ಟಾಲಿನ್ ಜೊತೆಗೆ ಒಳ ಒಪ್ಪಂದ ಇದು. ನೀರು ಬಿಟ್ಟ ಮೇಲೆ ಸಭೆ ಕರೆದಿದ್ದಾರೆ. ಮೇಕೆ ದಾಟು ವಿಚಾರವಾಗಿ ಪ್ರತಿಭಟನೆ ಮಾಡಿದರು. ಅಧಿಕಾರ ಬಂದ ಮೇಲೆ ಕಾವೇರಿನೂ ಇಲ್ಲ ಮೇಕೆದಾಟು ಇಲ್ಲ. ಸರ್ಕಾರ ನೀರು ಬಿಟ್ಟು ಕರ್ನಾಟಕದ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಗರಂ ಆದರು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…