BREAKING NEWS

ಪ್ರಮೋದ್‌ ಮುತಾಲಿಕ್‌ಗೆ ಮತ್ತೆ ಗೋವಾ ಪ್ರವೇಶ ನಿಷೇಧ

ಪಣಜಿ : ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ.

ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್‌ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ ಹಿಂದುತ್ವವಾದಿಯಾಗಿರುವ ಮುತಾಲಿಕ್‌, ಜಿಲ್ಲೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವಂತಹ, ಧರ್ಮಗಳ ಮಧ್ಯೆ ದ್ವೇಷ ಹರಡುವ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಾರೆ. ಇದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳ​ಲಾ​ಗಿದೆ.

ಈ ಹಿಂದೆಯೂ ಮುತಾಲಿಕ್‌ಗೆ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ಜಿಲ್ಲೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು.

ಹಿಂದೂಗಳು ಮನೆಯಲ್ಲಿ ಖಡ್ಗ, ತಲ್ವಾರ್‌ ಇಟ್ಟುಕೊಳ್ಳಿ : ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲಿ ಖಡ್ಗ, ತಲವಾರ್‌, ಮತ್ತಿತರ ಜೀವರಕ್ಷಕ ಆಯುಧಗಳನ್ನು ಇಟ್ಟುಕೊಳ್ಳಬೇಕು. ಆಯುಧಗಳನ್ನು ಇಟ್ಟುಕೊಂಡವರನ್ನೆಲ್ಲಾ ಬಂಧಿಸುವುದಾದರೆ ಮೊದಲು ಕೈಯಲ್ಲಿ ಹತ್ತಾರು ಆಯುಧಗಳನ್ನು ಹಿಡಿದ ದುರ್ಗಾದೇವಿಯನ್ನು, ಗದೆ ಹಿಡಿದ ಹನುಮಂತನನ್ನು ಬಂಧಿಸಲಿ ನೋಡೋಣ ಎಂದು ಶ್ರೀರಾಮ ಸೇನೆ ಮುಖಂಡ ಮುತಾಲಿಕ್‌ ಇತ್ತೀಚೆಗೆ ಸವಾಲು ಹಾಕಿ​ದ್ದರು. ಬಾಗಲಕೋಟೆ ನಗ​ರ​ದಲ್ಲಿ ಭಾನು​ವಾ​ರ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ​ಗಳು ಯಾರನ್ನೋ ಹೊಡೆಯಲು ಅಲ್ಲ, ಬದಲಿಗೆ ಗೋವುಗಳು ಹಾಗೂ ನಮ್ಮ ಅಕ್ಕ-ತಂಗಿಯರ ಹಾಗೂ ರಾಷ್ಟ್ರ, ಮಠ-ಮಂದಿರಗಳ ರಕ್ಷಣೆಗೆ ಆಯುಧಗಳನ್ನು ಬಳಸಬೇಕು ಎಂದ​ರು.

ಹಿಂದೂ ಕಾರ್ಯಕರ್ತರು, ಹೋರಾಟಗಾರರಿಗೆ ಹಾಗೂ ನನ್ನಂಥವ​ರಿಗೆ ಬಿಜೆಪಿಯಿಂದ ದ್ರೋಹ ಮಾಡಲಾಗಿದೆ. ನಮ್ಮ ರಕ್ತವನ್ನು ಬೆವರಾಗಿ ಹರಿಸಿ ಅಧಿಕಾರದ ಗದ್ದುಗೆಗೆ ಏರಿಸಿದ್ದಕ್ಕಾದರೂ ಕರುಣೆ ಇಲ್ಲದ ಬಿಜೆಪಿಗೆ ಈ ಬಾರಿಯ ಚುನಾ​ವ​ಣೆ​ಯಲ್ಲಿ ಕಾರ್ಕಳದಲ್ಲಿ ಸ್ಪರ್ಧಿಸಿ ಗೆದ್ದು ತೋರಿ​ಸು​ತ್ತೇವೆ ಎಂದು ಹೇಳಿ​ದ​ರು. ಹಿಂದೂ ಹುಡು​ಗಿ​ಯ​ರಿ​ಗೂ ಉದ್ಯೋ​ಗ​: ಲವ್‌ ಜಿಹಾದ್‌ಗೆ ನಮ್ಮ ಒಬ್ಬ ಹುಡುಗಿ ಹೋದರೆ ನಮ್ಮ ತರುಣರು 10 ಮುಸ್ಲಿಮ್‌ ಹುಡುಗಿರನ್ನು ಕರೆತರುವ ತಾಕತ್ತು ಹೊಂದಿದ್ದಾರೆ. ಹಾಗೆ ಕರೆತಂದರೆ ಶ್ರೀರಾಮಸೇನೆ ಅಂಥ ಯುವಕರಿಗೆ ಉದ್ಯೋಗ ಒದಗಿಸಲು ನೆರವಾಗುವ ಜತೆಗೆ ರಕ್ಷಣೆಯನ್ನೂ ನೀಡಲಿದೆ ಎಂದು ಪ್ರಮೋದ್‌ ಮುತಾಲಿಕ್‌ ಹೇಳಿದರು.

lokesh

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

4 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

5 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

7 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

7 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

7 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

7 hours ago