BREAKING NEWS

ಪ್ರಮೋದ್‌ ಮುತಾಲಿಕ್‌ಗೆ ಮತ್ತೆ ಗೋವಾ ಪ್ರವೇಶ ನಿಷೇಧ

ಪಣಜಿ : ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ.

ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್‌ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ ಹಿಂದುತ್ವವಾದಿಯಾಗಿರುವ ಮುತಾಲಿಕ್‌, ಜಿಲ್ಲೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವಂತಹ, ಧರ್ಮಗಳ ಮಧ್ಯೆ ದ್ವೇಷ ಹರಡುವ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಾರೆ. ಇದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳ​ಲಾ​ಗಿದೆ.

ಈ ಹಿಂದೆಯೂ ಮುತಾಲಿಕ್‌ಗೆ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ಜಿಲ್ಲೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು.

ಹಿಂದೂಗಳು ಮನೆಯಲ್ಲಿ ಖಡ್ಗ, ತಲ್ವಾರ್‌ ಇಟ್ಟುಕೊಳ್ಳಿ : ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲಿ ಖಡ್ಗ, ತಲವಾರ್‌, ಮತ್ತಿತರ ಜೀವರಕ್ಷಕ ಆಯುಧಗಳನ್ನು ಇಟ್ಟುಕೊಳ್ಳಬೇಕು. ಆಯುಧಗಳನ್ನು ಇಟ್ಟುಕೊಂಡವರನ್ನೆಲ್ಲಾ ಬಂಧಿಸುವುದಾದರೆ ಮೊದಲು ಕೈಯಲ್ಲಿ ಹತ್ತಾರು ಆಯುಧಗಳನ್ನು ಹಿಡಿದ ದುರ್ಗಾದೇವಿಯನ್ನು, ಗದೆ ಹಿಡಿದ ಹನುಮಂತನನ್ನು ಬಂಧಿಸಲಿ ನೋಡೋಣ ಎಂದು ಶ್ರೀರಾಮ ಸೇನೆ ಮುಖಂಡ ಮುತಾಲಿಕ್‌ ಇತ್ತೀಚೆಗೆ ಸವಾಲು ಹಾಕಿ​ದ್ದರು. ಬಾಗಲಕೋಟೆ ನಗ​ರ​ದಲ್ಲಿ ಭಾನು​ವಾ​ರ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ​ಗಳು ಯಾರನ್ನೋ ಹೊಡೆಯಲು ಅಲ್ಲ, ಬದಲಿಗೆ ಗೋವುಗಳು ಹಾಗೂ ನಮ್ಮ ಅಕ್ಕ-ತಂಗಿಯರ ಹಾಗೂ ರಾಷ್ಟ್ರ, ಮಠ-ಮಂದಿರಗಳ ರಕ್ಷಣೆಗೆ ಆಯುಧಗಳನ್ನು ಬಳಸಬೇಕು ಎಂದ​ರು.

ಹಿಂದೂ ಕಾರ್ಯಕರ್ತರು, ಹೋರಾಟಗಾರರಿಗೆ ಹಾಗೂ ನನ್ನಂಥವ​ರಿಗೆ ಬಿಜೆಪಿಯಿಂದ ದ್ರೋಹ ಮಾಡಲಾಗಿದೆ. ನಮ್ಮ ರಕ್ತವನ್ನು ಬೆವರಾಗಿ ಹರಿಸಿ ಅಧಿಕಾರದ ಗದ್ದುಗೆಗೆ ಏರಿಸಿದ್ದಕ್ಕಾದರೂ ಕರುಣೆ ಇಲ್ಲದ ಬಿಜೆಪಿಗೆ ಈ ಬಾರಿಯ ಚುನಾ​ವ​ಣೆ​ಯಲ್ಲಿ ಕಾರ್ಕಳದಲ್ಲಿ ಸ್ಪರ್ಧಿಸಿ ಗೆದ್ದು ತೋರಿ​ಸು​ತ್ತೇವೆ ಎಂದು ಹೇಳಿ​ದ​ರು. ಹಿಂದೂ ಹುಡು​ಗಿ​ಯ​ರಿ​ಗೂ ಉದ್ಯೋ​ಗ​: ಲವ್‌ ಜಿಹಾದ್‌ಗೆ ನಮ್ಮ ಒಬ್ಬ ಹುಡುಗಿ ಹೋದರೆ ನಮ್ಮ ತರುಣರು 10 ಮುಸ್ಲಿಮ್‌ ಹುಡುಗಿರನ್ನು ಕರೆತರುವ ತಾಕತ್ತು ಹೊಂದಿದ್ದಾರೆ. ಹಾಗೆ ಕರೆತಂದರೆ ಶ್ರೀರಾಮಸೇನೆ ಅಂಥ ಯುವಕರಿಗೆ ಉದ್ಯೋಗ ಒದಗಿಸಲು ನೆರವಾಗುವ ಜತೆಗೆ ರಕ್ಷಣೆಯನ್ನೂ ನೀಡಲಿದೆ ಎಂದು ಪ್ರಮೋದ್‌ ಮುತಾಲಿಕ್‌ ಹೇಳಿದರು.

lokesh

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

4 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

4 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

5 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

5 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

7 hours ago