ಪಣಜಿ : ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ.
ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ ಹಿಂದುತ್ವವಾದಿಯಾಗಿರುವ ಮುತಾಲಿಕ್, ಜಿಲ್ಲೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವಂತಹ, ಧರ್ಮಗಳ ಮಧ್ಯೆ ದ್ವೇಷ ಹರಡುವ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಾರೆ. ಇದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಈ ಹಿಂದೆಯೂ ಮುತಾಲಿಕ್ಗೆ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ಜಿಲ್ಲೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು.
ಹಿಂದೂಗಳು ಮನೆಯಲ್ಲಿ ಖಡ್ಗ, ತಲ್ವಾರ್ ಇಟ್ಟುಕೊಳ್ಳಿ : ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲಿ ಖಡ್ಗ, ತಲವಾರ್, ಮತ್ತಿತರ ಜೀವರಕ್ಷಕ ಆಯುಧಗಳನ್ನು ಇಟ್ಟುಕೊಳ್ಳಬೇಕು. ಆಯುಧಗಳನ್ನು ಇಟ್ಟುಕೊಂಡವರನ್ನೆಲ್ಲಾ ಬಂಧಿಸುವುದಾದರೆ ಮೊದಲು ಕೈಯಲ್ಲಿ ಹತ್ತಾರು ಆಯುಧಗಳನ್ನು ಹಿಡಿದ ದುರ್ಗಾದೇವಿಯನ್ನು, ಗದೆ ಹಿಡಿದ ಹನುಮಂತನನ್ನು ಬಂಧಿಸಲಿ ನೋಡೋಣ ಎಂದು ಶ್ರೀರಾಮ ಸೇನೆ ಮುಖಂಡ ಮುತಾಲಿಕ್ ಇತ್ತೀಚೆಗೆ ಸವಾಲು ಹಾಕಿದ್ದರು. ಬಾಗಲಕೋಟೆ ನಗರದಲ್ಲಿ ಭಾನುವಾರ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂಗಳು ಯಾರನ್ನೋ ಹೊಡೆಯಲು ಅಲ್ಲ, ಬದಲಿಗೆ ಗೋವುಗಳು ಹಾಗೂ ನಮ್ಮ ಅಕ್ಕ-ತಂಗಿಯರ ಹಾಗೂ ರಾಷ್ಟ್ರ, ಮಠ-ಮಂದಿರಗಳ ರಕ್ಷಣೆಗೆ ಆಯುಧಗಳನ್ನು ಬಳಸಬೇಕು ಎಂದರು.
ಹಿಂದೂ ಕಾರ್ಯಕರ್ತರು, ಹೋರಾಟಗಾರರಿಗೆ ಹಾಗೂ ನನ್ನಂಥವರಿಗೆ ಬಿಜೆಪಿಯಿಂದ ದ್ರೋಹ ಮಾಡಲಾಗಿದೆ. ನಮ್ಮ ರಕ್ತವನ್ನು ಬೆವರಾಗಿ ಹರಿಸಿ ಅಧಿಕಾರದ ಗದ್ದುಗೆಗೆ ಏರಿಸಿದ್ದಕ್ಕಾದರೂ ಕರುಣೆ ಇಲ್ಲದ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳದಲ್ಲಿ ಸ್ಪರ್ಧಿಸಿ ಗೆದ್ದು ತೋರಿಸುತ್ತೇವೆ ಎಂದು ಹೇಳಿದರು. ಹಿಂದೂ ಹುಡುಗಿಯರಿಗೂ ಉದ್ಯೋಗ: ಲವ್ ಜಿಹಾದ್ಗೆ ನಮ್ಮ ಒಬ್ಬ ಹುಡುಗಿ ಹೋದರೆ ನಮ್ಮ ತರುಣರು 10 ಮುಸ್ಲಿಮ್ ಹುಡುಗಿರನ್ನು ಕರೆತರುವ ತಾಕತ್ತು ಹೊಂದಿದ್ದಾರೆ. ಹಾಗೆ ಕರೆತಂದರೆ ಶ್ರೀರಾಮಸೇನೆ ಅಂಥ ಯುವಕರಿಗೆ ಉದ್ಯೋಗ ಒದಗಿಸಲು ನೆರವಾಗುವ ಜತೆಗೆ ರಕ್ಷಣೆಯನ್ನೂ ನೀಡಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…