ಪಣಜಿ : ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ.
ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ ಹಿಂದುತ್ವವಾದಿಯಾಗಿರುವ ಮುತಾಲಿಕ್, ಜಿಲ್ಲೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವಂತಹ, ಧರ್ಮಗಳ ಮಧ್ಯೆ ದ್ವೇಷ ಹರಡುವ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಾರೆ. ಇದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಈ ಹಿಂದೆಯೂ ಮುತಾಲಿಕ್ಗೆ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ಜಿಲ್ಲೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು.
ಹಿಂದೂಗಳು ಮನೆಯಲ್ಲಿ ಖಡ್ಗ, ತಲ್ವಾರ್ ಇಟ್ಟುಕೊಳ್ಳಿ : ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲಿ ಖಡ್ಗ, ತಲವಾರ್, ಮತ್ತಿತರ ಜೀವರಕ್ಷಕ ಆಯುಧಗಳನ್ನು ಇಟ್ಟುಕೊಳ್ಳಬೇಕು. ಆಯುಧಗಳನ್ನು ಇಟ್ಟುಕೊಂಡವರನ್ನೆಲ್ಲಾ ಬಂಧಿಸುವುದಾದರೆ ಮೊದಲು ಕೈಯಲ್ಲಿ ಹತ್ತಾರು ಆಯುಧಗಳನ್ನು ಹಿಡಿದ ದುರ್ಗಾದೇವಿಯನ್ನು, ಗದೆ ಹಿಡಿದ ಹನುಮಂತನನ್ನು ಬಂಧಿಸಲಿ ನೋಡೋಣ ಎಂದು ಶ್ರೀರಾಮ ಸೇನೆ ಮುಖಂಡ ಮುತಾಲಿಕ್ ಇತ್ತೀಚೆಗೆ ಸವಾಲು ಹಾಕಿದ್ದರು. ಬಾಗಲಕೋಟೆ ನಗರದಲ್ಲಿ ಭಾನುವಾರ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂಗಳು ಯಾರನ್ನೋ ಹೊಡೆಯಲು ಅಲ್ಲ, ಬದಲಿಗೆ ಗೋವುಗಳು ಹಾಗೂ ನಮ್ಮ ಅಕ್ಕ-ತಂಗಿಯರ ಹಾಗೂ ರಾಷ್ಟ್ರ, ಮಠ-ಮಂದಿರಗಳ ರಕ್ಷಣೆಗೆ ಆಯುಧಗಳನ್ನು ಬಳಸಬೇಕು ಎಂದರು.
ಹಿಂದೂ ಕಾರ್ಯಕರ್ತರು, ಹೋರಾಟಗಾರರಿಗೆ ಹಾಗೂ ನನ್ನಂಥವರಿಗೆ ಬಿಜೆಪಿಯಿಂದ ದ್ರೋಹ ಮಾಡಲಾಗಿದೆ. ನಮ್ಮ ರಕ್ತವನ್ನು ಬೆವರಾಗಿ ಹರಿಸಿ ಅಧಿಕಾರದ ಗದ್ದುಗೆಗೆ ಏರಿಸಿದ್ದಕ್ಕಾದರೂ ಕರುಣೆ ಇಲ್ಲದ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳದಲ್ಲಿ ಸ್ಪರ್ಧಿಸಿ ಗೆದ್ದು ತೋರಿಸುತ್ತೇವೆ ಎಂದು ಹೇಳಿದರು. ಹಿಂದೂ ಹುಡುಗಿಯರಿಗೂ ಉದ್ಯೋಗ: ಲವ್ ಜಿಹಾದ್ಗೆ ನಮ್ಮ ಒಬ್ಬ ಹುಡುಗಿ ಹೋದರೆ ನಮ್ಮ ತರುಣರು 10 ಮುಸ್ಲಿಮ್ ಹುಡುಗಿರನ್ನು ಕರೆತರುವ ತಾಕತ್ತು ಹೊಂದಿದ್ದಾರೆ. ಹಾಗೆ ಕರೆತಂದರೆ ಶ್ರೀರಾಮಸೇನೆ ಅಂಥ ಯುವಕರಿಗೆ ಉದ್ಯೋಗ ಒದಗಿಸಲು ನೆರವಾಗುವ ಜತೆಗೆ ರಕ್ಷಣೆಯನ್ನೂ ನೀಡಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…