ಪಣಜಿ : ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ.
ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ ಹಿಂದುತ್ವವಾದಿಯಾಗಿರುವ ಮುತಾಲಿಕ್, ಜಿಲ್ಲೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವಂತಹ, ಧರ್ಮಗಳ ಮಧ್ಯೆ ದ್ವೇಷ ಹರಡುವ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಾರೆ. ಇದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಈ ಹಿಂದೆಯೂ ಮುತಾಲಿಕ್ಗೆ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ಜಿಲ್ಲೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು.
ಹಿಂದೂಗಳು ಮನೆಯಲ್ಲಿ ಖಡ್ಗ, ತಲ್ವಾರ್ ಇಟ್ಟುಕೊಳ್ಳಿ : ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲಿ ಖಡ್ಗ, ತಲವಾರ್, ಮತ್ತಿತರ ಜೀವರಕ್ಷಕ ಆಯುಧಗಳನ್ನು ಇಟ್ಟುಕೊಳ್ಳಬೇಕು. ಆಯುಧಗಳನ್ನು ಇಟ್ಟುಕೊಂಡವರನ್ನೆಲ್ಲಾ ಬಂಧಿಸುವುದಾದರೆ ಮೊದಲು ಕೈಯಲ್ಲಿ ಹತ್ತಾರು ಆಯುಧಗಳನ್ನು ಹಿಡಿದ ದುರ್ಗಾದೇವಿಯನ್ನು, ಗದೆ ಹಿಡಿದ ಹನುಮಂತನನ್ನು ಬಂಧಿಸಲಿ ನೋಡೋಣ ಎಂದು ಶ್ರೀರಾಮ ಸೇನೆ ಮುಖಂಡ ಮುತಾಲಿಕ್ ಇತ್ತೀಚೆಗೆ ಸವಾಲು ಹಾಕಿದ್ದರು. ಬಾಗಲಕೋಟೆ ನಗರದಲ್ಲಿ ಭಾನುವಾರ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂಗಳು ಯಾರನ್ನೋ ಹೊಡೆಯಲು ಅಲ್ಲ, ಬದಲಿಗೆ ಗೋವುಗಳು ಹಾಗೂ ನಮ್ಮ ಅಕ್ಕ-ತಂಗಿಯರ ಹಾಗೂ ರಾಷ್ಟ್ರ, ಮಠ-ಮಂದಿರಗಳ ರಕ್ಷಣೆಗೆ ಆಯುಧಗಳನ್ನು ಬಳಸಬೇಕು ಎಂದರು.
ಹಿಂದೂ ಕಾರ್ಯಕರ್ತರು, ಹೋರಾಟಗಾರರಿಗೆ ಹಾಗೂ ನನ್ನಂಥವರಿಗೆ ಬಿಜೆಪಿಯಿಂದ ದ್ರೋಹ ಮಾಡಲಾಗಿದೆ. ನಮ್ಮ ರಕ್ತವನ್ನು ಬೆವರಾಗಿ ಹರಿಸಿ ಅಧಿಕಾರದ ಗದ್ದುಗೆಗೆ ಏರಿಸಿದ್ದಕ್ಕಾದರೂ ಕರುಣೆ ಇಲ್ಲದ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳದಲ್ಲಿ ಸ್ಪರ್ಧಿಸಿ ಗೆದ್ದು ತೋರಿಸುತ್ತೇವೆ ಎಂದು ಹೇಳಿದರು. ಹಿಂದೂ ಹುಡುಗಿಯರಿಗೂ ಉದ್ಯೋಗ: ಲವ್ ಜಿಹಾದ್ಗೆ ನಮ್ಮ ಒಬ್ಬ ಹುಡುಗಿ ಹೋದರೆ ನಮ್ಮ ತರುಣರು 10 ಮುಸ್ಲಿಮ್ ಹುಡುಗಿರನ್ನು ಕರೆತರುವ ತಾಕತ್ತು ಹೊಂದಿದ್ದಾರೆ. ಹಾಗೆ ಕರೆತಂದರೆ ಶ್ರೀರಾಮಸೇನೆ ಅಂಥ ಯುವಕರಿಗೆ ಉದ್ಯೋಗ ಒದಗಿಸಲು ನೆರವಾಗುವ ಜತೆಗೆ ರಕ್ಷಣೆಯನ್ನೂ ನೀಡಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.
ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…
ಹೊಸದಿಲ್ಲಿ : ಜೆನ್ಝೀಗಳ ನೆಚ್ಚಿನ ತಾಣವಾಗಿರುವ ಇನ್ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…