BREAKING NEWS

ಪ್ರಸಾದ್‌ ನಿಧನ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆ : ಸಿಎಂ ಸಂತಾಪ !

ಬೆಂಗಳೂರು : ದಲಿತ ಮುಖಂಡ ಸಂಸದ ವಿ.ಶ್ರೀನಿವಾಸ ಪ್ರಸಾದ್‌  ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನೆಗಳನ್ನು ಹಂಚಿಕೊಂಡಿರುವ ಅವರು, ʼ ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.
ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

22 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

23 hours ago