BREAKING NEWS

ಕಾಲೇಜು ವಿದ್ಯಾರ್ಥಿಗಳ ಜತೆ ಹಳೇ ಸಂಸತ್‌ ಭವನದ ಮುಂದಿರುವ ಫೋಟೊ ಹಂಚಿಕೊಂಡ ಪ್ರತಾಪ್‌ ಸಿಂಹ

ಇಂದು ಹೊಸ ಸಂಸತ್‌ ಭವನದ ಒಳಗೆ ದುಷ್ಕರ್ಮಿಗಳು ನುಗ್ಗಿದ ಘಟನೆ ಇಡೀ ದೇಶದ ರಾಜಕಾರಣವನ್ನು ಅಲ್ಲೋಲ ಕಲ್ಲೋಲವಾಗುವಂತೆ ಮಾಡಿದ್ದು, ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಮೈಸೂರು ಮೂಲದ ಮನೋರಂಜನ್‌ ಎಂಬುವವನೂ ಸಹ ಶಾಮೀಲಾಗಿದ್ದು, ಸಾಗರ್‌ ಶರ್ಮಾ, ಅಮೋಲ್‌ ಹಾಗೂ ನೀಲಂ ಅಜಾದ್‌ ಇನ್ನಿತರ ಬಂಧಿತ ಆರೋಪಿಗಳಾಗಿದ್ದಾರೆ.

ಈ ನಾಲ್ವರ ಪೈಕಿ ಸಾಗರ್‌ ಶರ್ಮಾ ವಿಸಿಟರ್ಸ್‌ ಪಾಸ್‌ ಬಳಸಿ ಸಂಸತ್‌ ಒಳಗೆ ಪ್ರವೇಶಿಸಿದ್ದು, ಸಂಸತ್‌ ಪ್ರವೇಶಿಸಲು ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದಾನೆ. ಹೀಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಪಾಸ್‌ ಪಡೆದವರು ಈ ರೀತಿ ಕೃತ್ಯ ಎಸಗಿದ್ದು, ಕೂಡಲೇ ಪ್ರತಾಪ್‌ ಸಿಂಹ ಅವರನ್ನು ಅಮಾನತು ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ.

ಒಂದೆಡೆ ತಮ್ಮ ವಿರುದ್ಧ ಹೇಳಿಕೆಗಳು ಹಾಗೂ ಪ್ರತಿಭಟನೆಗಳು ನಡೆಯುತ್ತಿದ್ದು, ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್‌ ಸಿಂಹ ದೆಹಲಿಯ ಹಳೆ ಸಂಸತ್‌ ಭವನದ ಎದುರು ಕಾಲೇಜು ವಿದ್ಯಾರ್ಥಿಗಳ ಜತೆ ಇರುವ ಫೋಟೊವನ್ನು ಟ್ವಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ವಿದ್ಯಾವರ್ಧಕ ಕಾಲೇಜಿನ ಪೊಲಿಟಿಕಲ್‌ ಸೈನ್ಸ್‌ ಸ್ಟೂಡೆಂಟ್ಸ್‌ ಜತೆಗೆ ಸೋಮವಾರ ಕ್ಲಿಕ್ಕಿಸಿಕೊಂಡ ಫೋಟೊʼ ಎಂದು ಕ್ಯಾಪ್ಷನ್‌ ಬರೆದುಕೊಂಡಿದ್ದಾರೆ ಪ್ರತಾಪ್‌ ಸಿಂಹ.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

11 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago