BREAKING NEWS

ಕಾಲೇಜು ವಿದ್ಯಾರ್ಥಿಗಳ ಜತೆ ಹಳೇ ಸಂಸತ್‌ ಭವನದ ಮುಂದಿರುವ ಫೋಟೊ ಹಂಚಿಕೊಂಡ ಪ್ರತಾಪ್‌ ಸಿಂಹ

ಇಂದು ಹೊಸ ಸಂಸತ್‌ ಭವನದ ಒಳಗೆ ದುಷ್ಕರ್ಮಿಗಳು ನುಗ್ಗಿದ ಘಟನೆ ಇಡೀ ದೇಶದ ರಾಜಕಾರಣವನ್ನು ಅಲ್ಲೋಲ ಕಲ್ಲೋಲವಾಗುವಂತೆ ಮಾಡಿದ್ದು, ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಮೈಸೂರು ಮೂಲದ ಮನೋರಂಜನ್‌ ಎಂಬುವವನೂ ಸಹ ಶಾಮೀಲಾಗಿದ್ದು, ಸಾಗರ್‌ ಶರ್ಮಾ, ಅಮೋಲ್‌ ಹಾಗೂ ನೀಲಂ ಅಜಾದ್‌ ಇನ್ನಿತರ ಬಂಧಿತ ಆರೋಪಿಗಳಾಗಿದ್ದಾರೆ.

ಈ ನಾಲ್ವರ ಪೈಕಿ ಸಾಗರ್‌ ಶರ್ಮಾ ವಿಸಿಟರ್ಸ್‌ ಪಾಸ್‌ ಬಳಸಿ ಸಂಸತ್‌ ಒಳಗೆ ಪ್ರವೇಶಿಸಿದ್ದು, ಸಂಸತ್‌ ಪ್ರವೇಶಿಸಲು ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದಾನೆ. ಹೀಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಪಾಸ್‌ ಪಡೆದವರು ಈ ರೀತಿ ಕೃತ್ಯ ಎಸಗಿದ್ದು, ಕೂಡಲೇ ಪ್ರತಾಪ್‌ ಸಿಂಹ ಅವರನ್ನು ಅಮಾನತು ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ.

ಒಂದೆಡೆ ತಮ್ಮ ವಿರುದ್ಧ ಹೇಳಿಕೆಗಳು ಹಾಗೂ ಪ್ರತಿಭಟನೆಗಳು ನಡೆಯುತ್ತಿದ್ದು, ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್‌ ಸಿಂಹ ದೆಹಲಿಯ ಹಳೆ ಸಂಸತ್‌ ಭವನದ ಎದುರು ಕಾಲೇಜು ವಿದ್ಯಾರ್ಥಿಗಳ ಜತೆ ಇರುವ ಫೋಟೊವನ್ನು ಟ್ವಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ವಿದ್ಯಾವರ್ಧಕ ಕಾಲೇಜಿನ ಪೊಲಿಟಿಕಲ್‌ ಸೈನ್ಸ್‌ ಸ್ಟೂಡೆಂಟ್ಸ್‌ ಜತೆಗೆ ಸೋಮವಾರ ಕ್ಲಿಕ್ಕಿಸಿಕೊಂಡ ಫೋಟೊʼ ಎಂದು ಕ್ಯಾಪ್ಷನ್‌ ಬರೆದುಕೊಂಡಿದ್ದಾರೆ ಪ್ರತಾಪ್‌ ಸಿಂಹ.

andolana

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

6 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

6 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

7 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

7 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

8 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

8 hours ago