ಇಂದು ಹೊಸ ಸಂಸತ್ ಭವನದ ಒಳಗೆ ದುಷ್ಕರ್ಮಿಗಳು ನುಗ್ಗಿದ ಘಟನೆ ಇಡೀ ದೇಶದ ರಾಜಕಾರಣವನ್ನು ಅಲ್ಲೋಲ ಕಲ್ಲೋಲವಾಗುವಂತೆ ಮಾಡಿದ್ದು, ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಮೈಸೂರು ಮೂಲದ ಮನೋರಂಜನ್ ಎಂಬುವವನೂ ಸಹ ಶಾಮೀಲಾಗಿದ್ದು, ಸಾಗರ್ ಶರ್ಮಾ, ಅಮೋಲ್ ಹಾಗೂ ನೀಲಂ ಅಜಾದ್ ಇನ್ನಿತರ ಬಂಧಿತ ಆರೋಪಿಗಳಾಗಿದ್ದಾರೆ.
ಈ ನಾಲ್ವರ ಪೈಕಿ ಸಾಗರ್ ಶರ್ಮಾ ವಿಸಿಟರ್ಸ್ ಪಾಸ್ ಬಳಸಿ ಸಂಸತ್ ಒಳಗೆ ಪ್ರವೇಶಿಸಿದ್ದು, ಸಂಸತ್ ಪ್ರವೇಶಿಸಲು ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಾಸ್ ಪಡೆದಿದ್ದಾನೆ. ಹೀಗೆ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದವರು ಈ ರೀತಿ ಕೃತ್ಯ ಎಸಗಿದ್ದು, ಕೂಡಲೇ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ.
ಒಂದೆಡೆ ತಮ್ಮ ವಿರುದ್ಧ ಹೇಳಿಕೆಗಳು ಹಾಗೂ ಪ್ರತಿಭಟನೆಗಳು ನಡೆಯುತ್ತಿದ್ದು, ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್ ಸಿಂಹ ದೆಹಲಿಯ ಹಳೆ ಸಂಸತ್ ಭವನದ ಎದುರು ಕಾಲೇಜು ವಿದ್ಯಾರ್ಥಿಗಳ ಜತೆ ಇರುವ ಫೋಟೊವನ್ನು ಟ್ವಟರ್ನಲ್ಲಿ ಹಂಚಿಕೊಂಡಿದ್ದಾರೆ. “ವಿದ್ಯಾವರ್ಧಕ ಕಾಲೇಜಿನ ಪೊಲಿಟಿಕಲ್ ಸೈನ್ಸ್ ಸ್ಟೂಡೆಂಟ್ಸ್ ಜತೆಗೆ ಸೋಮವಾರ ಕ್ಲಿಕ್ಕಿಸಿಕೊಂಡ ಫೋಟೊʼ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ ಪ್ರತಾಪ್ ಸಿಂಹ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…