BREAKING NEWS

ಪ್ರತಾಪ್‌ ಸಿಂಹ ಬಾಯಿ ಮುಚ್ಕೊಂಡಿರಬೇಕು: ಸಂಸದರಿಗೆ ಪ್ರದೀಪ್ ಈಶ್ವರ್ ಕೌಂಟರ್

ಚಿಕ್ಕಬಳ್ಳಾಪುರ : ಅನ್ನ ಭಾಗ್ಯ ಅಕ್ಕಿ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್​ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ನಾಯಕರು ಕೌಂಟರ್​​​​-ಪ್ರತಿ ಕೌಂಟರ್​​ ಕೊಡುತ್ತಿದ್ದಾರೆ. ಕೋಲಾರ ಸಂಸದ ಮುನಿಸ್ವಾಮಿ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್  ಈಶ್ವರ್  ನಡುವೆ  ವಾಗ್ಯುದ್ದ ನಡೆದಿದೆ.

ಪ್ರದೀಪ್ ಈಶ್ವರ್ ವಿರುದ್ಧ ಮಾತನಾಡಿದ್ದ ಬಿಜೆಪಿ  ಸಂಸದ ಮುನಿಸ್ವಾಮಿ, ಇಲ್ಲಿ ಯಾರೋ ಒಬ್ಬ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾನೆ. ಬೆಳಗ್ಗೆಯಿಂದ ಸಂಜೆವರೆಗೂ ಅಪ್ಪ-ಅಮ್ಮ ಅಂತಿದ್ದಾನೆ. ಈ ಥರದವರನ್ನು ನಾನ್ ನೋಡಿಲ್ಲ, ಅಬ್ಬಬ್ಬಾ ಏನ್ ಡ್ರಾಮಾ. ಮುಂದಿದೆ ಮಾರಿ ಹಬ್ಬ ಎಂದು ಮುನಿಸ್ವಾಮಿ ಕಿಡಿಕಾರಿದ್ದರು.
ಸಂಸದ ಮುನಿಸ್ವಾಮಿ ಅವರ ಹೇಳಿಕೆಗೆ ಪ್ರದೀಪ್ ಈಶ್ವರ್  ತಿರುಗೇಟು ನೀಡಿದ್ದಾರೆ, ಅವರ್ಯಾರೋ ಮನಿಸ್ವಾಮಿ ಅಂತೆ. ಅವ್ರ ಹೆಸರು ಕೋಲಾರದವರಿಗೆ ಗೊತ್ತಿಲ್ಲ, ಅವರೊಂಥರಾ ಚೈಲ್ಡ್ ಆರ್ಟಿಸ್ಟ್, ಒಬ್ಬ ಎಂಪಿ ಹೇಗೆ ಇರಬೇಕು ಎಂಬುದು ಅವರಿಗೆ ತಿಳಿದಿಲ್ಲ, ಮುಂದಿದೆ ಮುಸಲು ಪಂಡಗಾ (ಮಾರಿಹಬ್ಬ) ಅಂತಾ ನನಗೆ ಹೇಳ್ತಿದ್ದಾರೆ. ಮುನಿಶಾಮಣ್ಣ ನನಗೆ ಐದು ವರ್ಷಕ್ಕೆ ಇದೆ ಪಂಡಗಾ. ನಿಮಗೆ ಮುಂದಿನ ವರ್ಷವೇ ಇದೆ, ನಾವು ಬರ್ತೀವಿ ಎಂದು ಸಂಸದ ಮುನಿಸ್ವಾಮಿಗೆ  ಪ್ರದೀಪ್ ಈಶ್ವರ್ ಚಾಲೆಂಜ್ ಮಾಡಿದ್ದಾರೆ.
ಇನ್ನೂ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಹರಿಹಾಯ್ದಿರುವ ಪ್ರದೀಪ್ ಈಶ್ವರ್,  ನಾನೇನೋ ಹೊಸ ಶಾಸಕ. ಮೊದಲ ಬಾರಿ ಗೆದ್ದಿದ್ದೇನೆ. ನೀವು ಸಂಸದರಾಗಿ ಒಂಬತ್ತು ವರ್ಷ ಆಯ್ತಲ್ವಾ? ನಿಮಗಿನ್ನೂ ಸರಿಯಾಗಿ ಯಾರೂ ಮಾತು ಕಲಿಸಿಲ್ವಲ್ವ? ಎಂದು ಠಕ್ಕರ್‌ ನೀಡಿದ್ದಾರೆ.
ಶಾಸಕರಾಗಿ 40 ವರ್ಷಗಳ ಅನುಭವ ಇರುವ ಸಿದ್ದರಾಮಯ್ಯ ಅವರು ಹೊಸ ಶಾಸಕರಿಗೆ ಹೇಗೆ ಮಾತನಾಡಬೇಕು ಎಂಬ ಬಗ್ಗೆ ಓರಿಯೆಂಟೇಷನ್‌ ಕ್ಲಾಸ್‌ ತೆಗೆದುಕೊಳ್ಳಬೇಕು ಎಂದು ಪ್ರತಾಪ್‌ಸಿಂಹ ಅವರು ಇತ್ತೀಚೆಗೆ ಹೇಳಿದ್ದರು. ಅಕ್ಕಿ ವಿಚಾರದಲ್ಲಿ ಬಹಿರಂಗ ಚರ್ಚೆ ಮಾಡೋಣ ಬನ್ನಿ ಎಂದು ಪ್ರದೀಪ್‌ ಈಶ್ವರ್‌ ಅವರು ತೇಜಸ್ವಿ ಸೂರ್ಯ ಮತ್ತು ಪ್ರತಾಪ್‌ ಸಿಂಹ ಅವರಿಗೆ ನೀಡಿದ ಬಹಿರಂಗ ಕರೆಗೆ ನೀಡಿದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದರು.
ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರದೀಪ್ ಈಶ್ವರ್ ನಿಮಗೆ ತಾಕತ್ ಇದ್ರೆ ಪ್ರಾಮಾಣಿಕರಾದ್ರೆ ಬಹಿರಂಗ ಚರ್ಚೆಗೆ ಬನ್ನಿ. ಸಾವಿರಾರು ಜನರನ್ನು ಕೂರಿಸಿ ನೀವೇನ್ ಮಾಡಿದ್ದೀರಿ ಹೇಳಿ, ಸಿದ್ದರಾಮಯ್ಯ ಸಾಹೆಬ್ರು ಏನ್ ಮಾಡಿದ್ದಾರೆ ಅಂತ ನಾನು ಹೇಳ್ತೇನೆ ಎಂದಿದ್ದಾರೆ.

ಮೈಸೂರು ಸಂಸದರಾದ ಪ್ರತಾಪ್‌ ಸಿಂಹ ಅವರೇ ನೀವು ಬಾಯಿ ಮುಚ್ಕೊಂಡಿರ್ಬೇಕು. ಮಾತಾಡೋಕೆ ನಮಗೂ ಬರ್ತದೆ. ನಿಮಗೆ ನಿಜಕ್ಕೂ ಮಾತನಾಡೋಕೆ ಬರ್ತದೆ ಅಂತಿದ್ದರೆ ಬಹಿರಂಗ ಚರ್ಚೆಗೆ ಬನ್ನಿ. ನೀವು ಏನೇನು ಮಾಡಿದ್ದೀರಿ ಅಂತ ಹೇಳಿ, ಸಿದ್ದರಾಮಯ್ಯ ಅವರು ಏನೇನು ಮಾಡಿದ್ದಾರೆ ಅಂತ ನಾನೂ ಹೇಳ್ತೀನಿʼʼ ಎಂದರು ಪ್ರದೀಪ್‌ ಈಶ್ವರ್‌. ನೀವು ಎರಡೂ ಚುನಾವಣೆಗಳನ್ನು ಗೆದ್ದಿರುವುದು ಮೋದಿ ಅವರ ಹೆಸರಿನಲ್ಲಿ. ನಿಮ್ಮ ನೆಲೆಯಲ್ಲಿ ನೀವು ಏನು ಸಾಧನೆ ಮಾಡಿದ್ದೀರಿ ಎಂದು ಮೊದಲು ಹೇಳಿ ಎಂದ ಸವಾಲು ಹಾಕಿದರು.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

8 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago