ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದರು.
ಸದ್ಯ ವಿಕ್ರಂ ಸಿಂಹ ಅವರ ವಿಚಾರಣೆ ನಡೆಯುತ್ತಿದ್ದು, ಇತ್ತ ಮೈಸೂರಿನಲ್ಲಿ ಪ್ರತಾಪ್ ಸಿಂಹ ಸಿದ್ದರಾಮಯ್ಯನವರಿಂದ ನನ್ನ ಹಾಗೂ ನನ್ನ ತಮ್ಮನ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿ ಆಪಾದನೆ ಮಾಡಿದ್ದರು. ಇದಾದ ಬೆನ್ನಲ್ಲೇ ಇದೀಗ ವಿಕ್ರಂ ಸಿಂಹ ಸಹ ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು ಗೆಂಡೆಕಟ್ಟೆ ಅರಣ್ಯ ಪ್ರದೇಶದಿಂದ ಪೊಲೀಸರ ಜತೆ ತೆರಳುವಾಗ ಮಾತನಾಡಿದ್ದಾರೆ.
“ಈಗಲ್ಲ ಹೇಳ್ತೀನಿ. ಸಮಯ ಬರಲಿ ಎಲ್ಲವನ್ನೂ ಹೇಳ್ತೀನಿ. ನನ್ನ ವಿರುದ್ಧ ಎಷ್ಟು ಪಿತೂರಿ ಮಾಡ್ತಾ ಇದ್ದಾರೆ ಅನ್ನೋದನ್ನ ಬಹಿರಂಗವಾಗಿಯೇ ಹೇಳ್ತೀನಿ. ಯಾರ್ಯಾರ ಕೈವಾಡ ಇದೆ, ನಿಷ್ಠಾವಂತ ಅಧಿಕಾರಿ ಅಂತ ಯಾರನ್ನ ಹೇಳ್ತಾ ಇದ್ದೀರಿ. ಅವರ ಹಿಂದೆ ಯಾರಿದ್ದಾರೆ ಅನ್ನೋದನ್ನೂ ಹೇಳ್ತೀನಿ. ನನ್ನ ಹಾಗೂ ನನ್ನ ಅಣ್ಣನ್ನ ವ್ಯವಸ್ಥಿತವಾಗಿ ಮುಗಿಸೋದಕ್ಕೋಸ್ಕರ ಪ್ರಯತ್ನ ಮಾಡ್ತಾ ಇದ್ದಾರೆ. ನನ್ನ ಬ್ರದರ್ನ ಟಾರ್ಗೆಟ್ ಮಾಡ್ತಾ ಇದ್ದಾರೆ. ಇದಕ್ಕೆಲ್ಲಾ ಉತ್ತರ ಕೊಡ್ತೀನಿ” ಎಂದು ಹೇಳಿಕೆ ನೀಡಿದರು.
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…
ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…
ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ…
ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…