ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದರು.
ಸದ್ಯ ವಿಕ್ರಂ ಸಿಂಹ ಅವರ ವಿಚಾರಣೆ ನಡೆಯುತ್ತಿದ್ದು, ಇತ್ತ ಮೈಸೂರಿನಲ್ಲಿ ಪ್ರತಾಪ್ ಸಿಂಹ ಸಿದ್ದರಾಮಯ್ಯನವರಿಂದ ನನ್ನ ಹಾಗೂ ನನ್ನ ತಮ್ಮನ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿ ಆಪಾದನೆ ಮಾಡಿದ್ದರು. ಇದಾದ ಬೆನ್ನಲ್ಲೇ ಇದೀಗ ವಿಕ್ರಂ ಸಿಂಹ ಸಹ ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು ಗೆಂಡೆಕಟ್ಟೆ ಅರಣ್ಯ ಪ್ರದೇಶದಿಂದ ಪೊಲೀಸರ ಜತೆ ತೆರಳುವಾಗ ಮಾತನಾಡಿದ್ದಾರೆ.
“ಈಗಲ್ಲ ಹೇಳ್ತೀನಿ. ಸಮಯ ಬರಲಿ ಎಲ್ಲವನ್ನೂ ಹೇಳ್ತೀನಿ. ನನ್ನ ವಿರುದ್ಧ ಎಷ್ಟು ಪಿತೂರಿ ಮಾಡ್ತಾ ಇದ್ದಾರೆ ಅನ್ನೋದನ್ನ ಬಹಿರಂಗವಾಗಿಯೇ ಹೇಳ್ತೀನಿ. ಯಾರ್ಯಾರ ಕೈವಾಡ ಇದೆ, ನಿಷ್ಠಾವಂತ ಅಧಿಕಾರಿ ಅಂತ ಯಾರನ್ನ ಹೇಳ್ತಾ ಇದ್ದೀರಿ. ಅವರ ಹಿಂದೆ ಯಾರಿದ್ದಾರೆ ಅನ್ನೋದನ್ನೂ ಹೇಳ್ತೀನಿ. ನನ್ನ ಹಾಗೂ ನನ್ನ ಅಣ್ಣನ್ನ ವ್ಯವಸ್ಥಿತವಾಗಿ ಮುಗಿಸೋದಕ್ಕೋಸ್ಕರ ಪ್ರಯತ್ನ ಮಾಡ್ತಾ ಇದ್ದಾರೆ. ನನ್ನ ಬ್ರದರ್ನ ಟಾರ್ಗೆಟ್ ಮಾಡ್ತಾ ಇದ್ದಾರೆ. ಇದಕ್ಕೆಲ್ಲಾ ಉತ್ತರ ಕೊಡ್ತೀನಿ” ಎಂದು ಹೇಳಿಕೆ ನೀಡಿದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…