BREAKING NEWS

ಅಣ್ಣನನ್ನು ಟಾರ್ಗೆಟ್‌ ಮಾಡ್ತಿದ್ದಾರೆ, ಉತ್ತರ ಕೊಡ್ತೇನೆ: ವಿಕ್ರಂ ಸಿಂಹ ಆಕ್ರೋಶ

ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದರು.

ಸದ್ಯ ವಿಕ್ರಂ ಸಿಂಹ ಅವರ ವಿಚಾರಣೆ ನಡೆಯುತ್ತಿದ್ದು, ಇತ್ತ ಮೈಸೂರಿನಲ್ಲಿ ಪ್ರತಾಪ್‌ ಸಿಂಹ ಸಿದ್ದರಾಮಯ್ಯನವರಿಂದ ನನ್ನ ಹಾಗೂ ನನ್ನ ತಮ್ಮನ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿ ಆಪಾದನೆ ಮಾಡಿದ್ದರು. ಇದಾದ ಬೆನ್ನಲ್ಲೇ ಇದೀಗ ವಿಕ್ರಂ ಸಿಂಹ ಸಹ ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು ಗೆಂಡೆಕಟ್ಟೆ ಅರಣ್ಯ ಪ್ರದೇಶದಿಂದ ಪೊಲೀಸರ ಜತೆ ತೆರಳುವಾಗ ಮಾತನಾಡಿದ್ದಾರೆ.

“ಈಗಲ್ಲ ಹೇಳ್ತೀನಿ. ಸಮಯ ಬರಲಿ ಎಲ್ಲವನ್ನೂ ಹೇಳ್ತೀನಿ. ನನ್ನ ವಿರುದ್ಧ ಎಷ್ಟು ಪಿತೂರಿ ಮಾಡ್ತಾ ಇದ್ದಾರೆ ಅನ್ನೋದನ್ನ ಬಹಿರಂಗವಾಗಿಯೇ ಹೇಳ್ತೀನಿ. ಯಾರ್ಯಾರ ಕೈವಾಡ ಇದೆ, ನಿಷ್ಠಾವಂತ ಅಧಿಕಾರಿ ಅಂತ ಯಾರನ್ನ ಹೇಳ್ತಾ ಇದ್ದೀರಿ. ಅವರ ಹಿಂದೆ ಯಾರಿದ್ದಾರೆ ಅನ್ನೋದನ್ನೂ ಹೇಳ್ತೀನಿ. ನನ್ನ ಹಾಗೂ ನನ್ನ ಅಣ್ಣನ್ನ ವ್ಯವಸ್ಥಿತವಾಗಿ ಮುಗಿಸೋದಕ್ಕೋಸ್ಕರ ಪ್ರಯತ್ನ ಮಾಡ್ತಾ ಇದ್ದಾರೆ. ನನ್ನ ಬ್ರದರ್‌ನ ಟಾರ್ಗೆಟ್‌ ಮಾಡ್ತಾ ಇದ್ದಾರೆ. ಇದಕ್ಕೆಲ್ಲಾ ಉತ್ತರ ಕೊಡ್ತೀನಿ” ಎಂದು ಹೇಳಿಕೆ ನೀಡಿದರು.

andolana

Recent Posts

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

1 hour ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

2 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

2 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

2 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

2 hours ago

ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ: ನಟ ರವಿಚಂದ್ರನ್‌ ವಿಶ್ವಾಸ

ಬೆಂಗಳೂರು: ನಿಮಗೆಲ್ಲಾ ಡಿಬಾಸ್‌, ಆ ಡಿಬಾಸ್‌ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ ಎಂದು ನಟ ರವಿಚಂದ್ರನ್‌…

2 hours ago