ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದರು.
ಸದ್ಯ ವಿಕ್ರಂ ಸಿಂಹ ಅವರ ವಿಚಾರಣೆ ನಡೆಯುತ್ತಿದ್ದು, ಇತ್ತ ಮೈಸೂರಿನಲ್ಲಿ ಪ್ರತಾಪ್ ಸಿಂಹ ಸಿದ್ದರಾಮಯ್ಯನವರಿಂದ ನನ್ನ ಹಾಗೂ ನನ್ನ ತಮ್ಮನ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿ ಆಪಾದನೆ ಮಾಡಿದ್ದರು. ಇದಾದ ಬೆನ್ನಲ್ಲೇ ಇದೀಗ ವಿಕ್ರಂ ಸಿಂಹ ಸಹ ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು ಗೆಂಡೆಕಟ್ಟೆ ಅರಣ್ಯ ಪ್ರದೇಶದಿಂದ ಪೊಲೀಸರ ಜತೆ ತೆರಳುವಾಗ ಮಾತನಾಡಿದ್ದಾರೆ.
“ಈಗಲ್ಲ ಹೇಳ್ತೀನಿ. ಸಮಯ ಬರಲಿ ಎಲ್ಲವನ್ನೂ ಹೇಳ್ತೀನಿ. ನನ್ನ ವಿರುದ್ಧ ಎಷ್ಟು ಪಿತೂರಿ ಮಾಡ್ತಾ ಇದ್ದಾರೆ ಅನ್ನೋದನ್ನ ಬಹಿರಂಗವಾಗಿಯೇ ಹೇಳ್ತೀನಿ. ಯಾರ್ಯಾರ ಕೈವಾಡ ಇದೆ, ನಿಷ್ಠಾವಂತ ಅಧಿಕಾರಿ ಅಂತ ಯಾರನ್ನ ಹೇಳ್ತಾ ಇದ್ದೀರಿ. ಅವರ ಹಿಂದೆ ಯಾರಿದ್ದಾರೆ ಅನ್ನೋದನ್ನೂ ಹೇಳ್ತೀನಿ. ನನ್ನ ಹಾಗೂ ನನ್ನ ಅಣ್ಣನ್ನ ವ್ಯವಸ್ಥಿತವಾಗಿ ಮುಗಿಸೋದಕ್ಕೋಸ್ಕರ ಪ್ರಯತ್ನ ಮಾಡ್ತಾ ಇದ್ದಾರೆ. ನನ್ನ ಬ್ರದರ್ನ ಟಾರ್ಗೆಟ್ ಮಾಡ್ತಾ ಇದ್ದಾರೆ. ಇದಕ್ಕೆಲ್ಲಾ ಉತ್ತರ ಕೊಡ್ತೀನಿ” ಎಂದು ಹೇಳಿಕೆ ನೀಡಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…