BREAKING NEWS

ಸಿದ್ದು ಪರ ಪ್ರಚಾರಕ್ಕಿಳಿದ ಶಿವಣ್ಣ ವಿರುದ್ಧವೇ ಪ್ರತಾಪ್ ಸಿಂಹ ಟ್ವಿಟ್; ‘ದೊಡನೆ ಮಧ್ಯೆ ಬೆಂಕಿ ಹಚ್ಚಬೇಡ’ ಎಂದ ಫ್ಯಾನ್ಸ್

ಬೆಂಗಳೂರು: ಇಡೀ ಕರ್ನಾಟಕದಲ್ಲೇ ಸದ್ಯ ಹೈವೋಲ್ವೇಜ್ ಕ್ಷೇತ್ರ ಎಂದರೆ ವರುಣಾ, ಒಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ನನ್ನ ಕೊನೇ ಚುನಾವಣೆ, ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಅಖಾಡಕ್ಕೆ ಧುಮುಕಿದ್ದಾರೆ. ಇನ್ನೊಂದೆಡೆ ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗಿದ ವಿ. ಸೋಮಣ್ಣ ಸಿದ್ದರಾಮಯ್ಯ ಎದುರು ತೊಡೆ ತಟ್ಟಿ ನಿಂತಿದ್ದಾರೆ.

ಇಷ್ಟು ದಿನ ಸಿದ್ದರಾಮಯ್ಯಗೆ ಅವಕಾಶ ನೀಡಿದ್ದೀರಿ, ನನಗೆ ಒಮ್ಮೆ ಆಶೀರ್ವಾದ ಮಾಡಿ ಎಂದು ಸೋಮಣ್ಣ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಪರ ದೊಡ್ಮನೆ ಕುಡಿ ಡಾ. ರಾಜ್‌ಕುಮಾರ್ ಪುತ್ರ ಶಿವಣ್ಣ ಮತಬೇಟೆಗೆ ಮುಂದಾಗಿರುವುದು ಬಿಜೆಪಿ ನಿದ್ದೆಗೆಡಿಸಿದೆ. ಈ ಬಗ್ಗೆ ಸಚಿವ ವಿ. ಸೋಮಣ್ಣ ಬಹಿರಂಗವಾಗಿ ಶಿವಣ್ಣ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ವಿ. ಸೋಮಣ್ಣ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಶಿವಣ್ಣನ ನಡೆ ಬಗ್ಗೆ ಟ್ವಿಟ್ ಮಾಡಿದ್ದಾರೆ. ‘ಪುನೀತ್ ರಾಜಕುಮಾರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ವಿ. ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ. ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ ‘ ಎಂದು ಪ್ರತಾಪ್ ಸಿಂಹ ಟ್ವಿಟ್ ಮಾಡಿರುವುದು ಭಾರೀ ಟೀಕೆಗೆ ಗುರಿಯಾಗಿದೆ.

ಅದರಲ್ಲೂ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡುತ್ತಿರುವ ಫೋಟೋ, ರಾಘಣ್ಣ ಪುನೀತ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿಸಿದ ಸೋಮಣ್ಣರನ್ನು ಶ್ಲಾಘಿಸುತ್ತಿರುವ ವಿಡಿಯೋ ಟ್ವಿಟ್ ಮಾಡಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗಿದ್ದು, ದೊಡ್ಡನೆ ಕುಟುಂಬದ ಮಧ್ಯೆಯೇ ಪ್ರತಾಪ್ ಸಿಂಹ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ಶಿವಣ್ಣ ಫ್ಯಾನ್ಸ್ ಕೆಂಡಕಾರಿದ್ದಾರೆ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

6 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

6 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

7 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

12 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

15 hours ago