ಬೆಂಗಳೂರು: ಇಡೀ ಕರ್ನಾಟಕದಲ್ಲೇ ಸದ್ಯ ಹೈವೋಲ್ವೇಜ್ ಕ್ಷೇತ್ರ ಎಂದರೆ ವರುಣಾ, ಒಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ನನ್ನ ಕೊನೇ ಚುನಾವಣೆ, ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಅಖಾಡಕ್ಕೆ ಧುಮುಕಿದ್ದಾರೆ. ಇನ್ನೊಂದೆಡೆ ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗಿದ ವಿ. ಸೋಮಣ್ಣ ಸಿದ್ದರಾಮಯ್ಯ ಎದುರು ತೊಡೆ ತಟ್ಟಿ ನಿಂತಿದ್ದಾರೆ.
ಇಷ್ಟು ದಿನ ಸಿದ್ದರಾಮಯ್ಯಗೆ ಅವಕಾಶ ನೀಡಿದ್ದೀರಿ, ನನಗೆ ಒಮ್ಮೆ ಆಶೀರ್ವಾದ ಮಾಡಿ ಎಂದು ಸೋಮಣ್ಣ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಪರ ದೊಡ್ಮನೆ ಕುಡಿ ಡಾ. ರಾಜ್ಕುಮಾರ್ ಪುತ್ರ ಶಿವಣ್ಣ ಮತಬೇಟೆಗೆ ಮುಂದಾಗಿರುವುದು ಬಿಜೆಪಿ ನಿದ್ದೆಗೆಡಿಸಿದೆ. ಈ ಬಗ್ಗೆ ಸಚಿವ ವಿ. ಸೋಮಣ್ಣ ಬಹಿರಂಗವಾಗಿ ಶಿವಣ್ಣ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ವಿ. ಸೋಮಣ್ಣ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಶಿವಣ್ಣನ ನಡೆ ಬಗ್ಗೆ ಟ್ವಿಟ್ ಮಾಡಿದ್ದಾರೆ. ‘ಪುನೀತ್ ರಾಜಕುಮಾರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ವಿ. ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ. ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ ‘ ಎಂದು ಪ್ರತಾಪ್ ಸಿಂಹ ಟ್ವಿಟ್ ಮಾಡಿರುವುದು ಭಾರೀ ಟೀಕೆಗೆ ಗುರಿಯಾಗಿದೆ.
ಅದರಲ್ಲೂ ಸಿದ್ದರಾಮಯ್ಯ ಪರ ಶಿವರಾಜ್ಕುಮಾರ್ ಪ್ರಚಾರ ಮಾಡುತ್ತಿರುವ ಫೋಟೋ, ರಾಘಣ್ಣ ಪುನೀತ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿಸಿದ ಸೋಮಣ್ಣರನ್ನು ಶ್ಲಾಘಿಸುತ್ತಿರುವ ವಿಡಿಯೋ ಟ್ವಿಟ್ ಮಾಡಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗಿದ್ದು, ದೊಡ್ಡನೆ ಕುಟುಂಬದ ಮಧ್ಯೆಯೇ ಪ್ರತಾಪ್ ಸಿಂಹ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ಶಿವಣ್ಣ ಫ್ಯಾನ್ಸ್ ಕೆಂಡಕಾರಿದ್ದಾರೆ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…