BREAKING NEWS

ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್‌ ನೆಟ್ಟಾರು ಪತ್ನಿ ಕೆಲಸದಿಂದ ವಜಾ

ಮಂಗಳೂರು : ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದ.ಕ. ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ಕೆಲಸಕ್ಕೆ ಕುತ್ತುಬಂದಿದೆ.

ರಾಜ್ಯದಲ್ಲಿ ಈಗ ಸರ್ಕಾರ ಬದಲಾಗಿರುವುದರಿಂದ ನೂತನ ಕುಮಾರಿ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಈ ಹಿಂದಿನ ಸರ್ಕಾರ ಮಾಡಿದ ಎಲ್ಲ ರೀತಿಯ ತಾತ್ಕಾಲಿಕ ನೆಲೆಯ ನೇಮಕಾತಿಗಳನ್ನು ರದ್ದುಪಡಿಸುವುದು ವಾಡಿಕೆ. ಅದರಂತೆ ನೂತನ ಕುಮಾರಿ ಅವರ ಉದ್ಯೋಗಕ್ಕೂ ಕತ್ತರಿ ಪ್ರಯೋಗ ಮಾಡಲಾಗಿದೆ. 

ಅವರನ್ನು ಕೂಡ ತಕ್ಷಣದಿಂದಲೇ ಕರ್ತವ್ಯದಿಂದ ತೆಗೆದುಹಾಕಿ ಆದೇಶ ಹೊರಡಿಸಲಾಗಿದೆ. ಇದರಂತೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ನಿರ್ವಹಿಸುತ್ತಿದ್ದ ನೂತನ ಕುಮಾರಿ ಶುಕ್ರವಾರ ಹೊರಹೋಗುವಂತಾಗಿದೆ. ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು.

ಅಲ್ಲದೆ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು. 

ಈ ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್‌ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಈ ಹುದ್ದೆ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಇಲ್ಲವೇ ಮುಂದಿನ ಆದೇಶ ವರೆಗೆ ಎಂದು ನಮೂದಿಸಲಾಗಿತ್ತು. ಆ ಆದೇಶದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಎಂದಿದ್ದರೂ ನೂತನ ಕುಮಾರಿ ಅವರ ಅಪೇಕ್ಷೆ ಮೇರೆಗೆ ಅವರನ್ನು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಅ.14ರಂದು ನೂತನ ಕುಮಾರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈಗ ಸರ್ಕಾರ ಬದಲಾದ್ದರಿಂದ ಕೇವಲ ಏಳು ತಿಂಗಳಲ್ಲೇ ನೂತನ ಕುಮಾರಿ ಅವರು ಕರ್ತವ್ಯವನ್ನು ತ್ಯಜಿಸಬೇಕಾಗಿ ಬಂದಿದೆ.

ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ. ಸರ್ಕಾರಿ ಕೆಲಸದಿಂದ ಬಿಡುಗಡೆಗೊಳಿಸಿರುವ ಕುರಿತಂತೆ ಆದೇಶದ ಬಗ್ಗೆ ನೂತನ ಕುಮಾರಿ ಅವರು ಗಮನಕ್ಕೆ ತಂದಿದ್ದಾರೆ. ಅವರನ್ನು ಮತ್ತೆ ಮುಂದುವರಿಸುವ ಬಗ್ಗೆ ತಕ್ಷಣವೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್‌ ತಿಳಿಸಿದ್ದಾರೆ.

lokesh

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

1 hour ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

1 hour ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

2 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

2 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

2 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

2 hours ago