BREAKING NEWS

ಆಸ್ಪತ್ರೆಗೆ ಹೋಗಲು 7 ಕಿಮೀ ನಡೆದ ಗರ್ಭಿಣಿ, ಬಿಸಿಲಿನ ತಾಪದಿಂದ ಸಾವು

ಪಾಲ್ಘಾರ್: ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮೇ ತಿಂಗಳಲ್ಲಿ ಬಿಸಿಲಿನ ಝಳ ಇನ್ನೂ ಹೆಚ್ಚಾಗಿದೆ. ಹೊರಗಡೆ ಓಡಾಡುವುದು ಕಷ್ಟವಾಗಿದೆ. ಬಿಸಿಲಿನ ಝಳ ತಾಳಳಾರದೇ, ಆರೋಗ್ಯದಲ್ಲಿ ವ್ಯತ್ಯಾಸವಾಗಿ ಸಾವನ್ನಪ್ಪಿರುವ ಘಟನೆಗಳೂ ವರದಿಯಾಗಿದೆ.

ಮಹಾರಾಷ್ಟ್ರದ ಫಲ್ಘಾರ್ ಜಿಲ್ಲೆಯಲ್ಲೂ ಇಂತದ್ದೇ ಘಟನೆ ನಡೆದಿದೆ. ಇಲ್ಲಿನ 21 ವರ್ಷದ ಗರ್ಭಿಣಿಯೊಬ್ಬರು, ತಮ್ಮ ಊರಿನಿಂದ 7 ಕಿಮೀ ದೂರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗಾಗಿ ರಣ ಬಿಸಿಲಿನಲ್ಲಿ ನಡೆದುಕೊಂಡು ಹೋಗಿದ್ದಾರೆ. ಅಲ್ಲಿಂದ ವಾಪಸ್ ಬರುವಾಗ ಸೂರ್ಯಾಘಾತ (Sun Stroke) ನಿಂದ ಮೃತಪಟ್ಟಿದ್ದಾರೆ.

ಈ ಘಟನೆ ಬಗ್ಗೆ ಜಿಲ್ಲಾ ಸಿವಿಲ್ ಸರ್ಜನ್ ಡಾ ಸಂಜಯ್ ಬೋಡಾಡೆ ಪ್ರತಿಕ್ರಿಯಿಸಿ, “ಆಕೆ 9 ತಿಂಗಳ ಗರ್ಭಿಣಿಯಿದ್ದರು. ನಿಯಮಿತವಾಗಿ ಪ್ರಾಥಮಿಕ ಕೇಂದ್ರಕ್ಕೆ ತಪಾಸಣೆಗಾಗಿ ಬರುತ್ತಿದ್ದರು. ಎಂದಿನಂತೆ ಬಿಸಿಲಿನಲ್ಲಿ 7 ಕಿಮೀ ನಡೆದುಕೊಂಡು ಬಂದಿದ್ದಾರೆ. ಚಿಕಿತ್ಸೆ ಪಡೆದು ವಾಪಸ್ ತೆರಳುವಾಗ 3.5 ಕಿಮೀ ನಡೆದುಕೊಂಡು ಹೋಗಿದ್ದಾರೆ.

ಅಲ್ಲಿ ಅವರಿಗೆ ಸನ್ ಸ್ಟ್ರೋಕ್ ಆಗಿದೆ. ಕೂಡಲೇ ಪ್ರಾಥಮಿಕ ಕೇಂದ್ರದಲ್ಲಿ ವೈದ್ಯರು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ದಹಾನುವಿನ ಧುಂಡಲವಾಡಿಯಲ್ಲಿರುವ ವಿಶೇಷ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ದುರಾದೃಷ್ಟವಶಾತ್, ಮಾರ್ಗಮಧ್ಯೆ ಆಕೆ ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದಾಳೆ ಮತ್ತು ಭ್ರೂಣವನ್ನೂ ಕಳೆದುಕೊಂಡಿದ್ದಾಳೆ” ಎಂದಿದ್ದಾರೆ.

ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿಲ್ಲ ಮತ್ತು ಕಳಸ ಪಿಎಚ್‌ಸಿ ವೈದ್ಯರು ತಕ್ಷಣ ಗಮನ ಹರಿಸಿದ್ದರು. ಆಕೆಯ “ಅರೆ ಕೊಮೊರ್ಬಿಡ್ ಸ್ಥಿತಿ” ಯಿಂದ ಅವರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದ ಕಾರಣ, ಅವರು ಅವಳನ್ನು ವಿಶೇಷ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಅವರು ಹೇಳಿದರು.

ತಾಪಮಾನ ಹೆಚ್ಚಿದ್ದರಿಂದ ಮಹಿಳೆ 7 ಕಿಮೀ ನಡೆದಿದ್ದರಿಂದ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಪರಿಣಾಮವಾಗಿ, ಸನ್‌ ಸ್ಟ್ರೋಕ್ ಆಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಪಲ್ಘಾರ್ ಜಿಲ್ಲಾ ಪರಿಷದ್ ಅಧ್ಯಕ್ಷ ಪ್ರತಿಕ್ರಿಯಿಸಿ, “ಗರ್ಭಿಣಿಯಾಗಿದ್ದ ಆಕೆ ಅನಿಮಿಯಾದಿಂದ ಬಳಲುತ್ತಿದ್ದರು. ಅಲ್ಲಿನ ಆಶಾ ಕಾರ್ಯಕರ್ತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರುತ್ತಾರೆ. ವೈದ್ಯರು ಪರೀಕ್ಷಿಸಿ ಔಷಧಗಳನ್ನು ಕೊಟ್ಟರೂ ವ್ಯರ್ಥವಾಯಿತು. ಜೊತೆಗೆ ಈ ಪ್ರಾಥಮಿಕ ಕೇಂದ್ರದಲ್ಲಿ ಐಸಿಯು ವ್ಯವಸ್ಥೆ ಇಲ್ಲ. ಇದ್ದಿದ್ದರೆ ಉಳಿಸಿಕೊಳ್ಳಬಹುದಾಗಿತ್ತು. ಇದನ್ನು ಇಲ್ಲಿಗೇ ಬಿಡುವುದಿಲ್ಲ. ಉನ್ನತ ಮಟ್ಟದವರೆಗೆ ಕೊಂಡೊಯ್ದು, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವುದಾಗಿ’ ಹೇಳಿದರು.

ಪದೇ ಪದೇ ಇಂತಹ ಘಟನೆಗಳು ವರದಿ

ಸರಿಯಾದ ಚಿಕಿತ್ಸೆ ಸಿಗದೇ, ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿಯ ಸಾವು ವರದಿಯಾಗುತ್ತಲೇ ಇರುತ್ತದೆ. ರಾಜ್ಯದ ವಿಚಾರಕ್ಕೆ ಬರುವುದಾದರೆ, ಹೆರಿಗೆ ಕಾರ್ಡ್ ಇಲ್ಲ ಎನ್ನುವ ಕಾರಣಕ್ಕಾಗಿ ಚಿಕಿತ್ಸೆ ಸಿಗದೇ ಅವಳಿ ಮಕ್ಕಳಿಗೆ ಜನ್ಮ ನೀಡುವ ಸಂದರ್ಭದಲ್ಲಿ ಗರ್ಭಿಣಿ ಸಾವನ್ನಪ್ಪಿರುವ ಮನಕಲಕುವ ಘಟನೆ ತುಮಕೂರಿನಲ್ಲಿ ನಡೆದಿತ್ತು. ಇದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಕಹಿ ಮರೆಯಾಗುವ ಮುನ್ನ, ಮತ್ತೊಂದು ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನಲ್ಲಿ ಹೆಚ್ಚಿನ ಚಿಕಿತ್ಸೆ ಸಿಗದೇ, ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಹೆರಿಯಾಗಿದೆ. ಮಗು ಸಾವನ್ನಪ್ಪಿದೆ.

ಹೆರಿಗೆಗೆಂದು ಯಾದಗಿರಿ ಜಿಲ್ಲಾಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago