BREAKING NEWS

ಕಾಂಗ್ರೆಸ್​ ಗ್ಯಾರಂಟಿ ಜಾರಿಗೆ ಸಿದ್ಧತೆ : ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಸಭೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್​ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್​ ಸಿದ್ಧತೆ ನಡೆಸಿದೆ. ಈ ಸಂಬಂಧ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಗ್ರಹಣಕ್ಕೂ ಮುನ್ನ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.

ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಐ.ಎಸ್.ಎನ್​.​ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಮುಂದಾಗಿದ್ದು, ಅದಕ್ಕೂ ಮುನ್ನ ಈಗ ಅಧಿಕಾರಿಗಳ ಜತೆ ನಿಯೋಜಿತ ಸಿಎಂ ಚರ್ಚಿಸಿದ್ದಾರೆ.

ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಯಾವುವು? : ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತರುತ್ತೇವೆ ಎಂದು ಕಾಂಗ್ರೆಸ್​ ಹೇಳಿದೆ. ಈ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂಪಾಯಿ ಅಕೌಂಟ್ ಸೇರಲಿದೆ ಎಂದು ಭರವಸೆ ನೀಡಿದೆ. ಎರಡನೇ ಗ್ಯಾರಂಟಿಯಾಗಿ ಮನೆ ಮನೆಗೂ 200 ಯೂನಿಟ್ ವಿದ್ಯುತ್ ಉಚಿತ ನೀಡುತ್ತಾರಂತೆ. ಮೂರನೇ ಗ್ಯಾರಂಟಿ ಏನೆಂದರೆ, ಅನ್ನ ಭಾಗ್ಯದ ಮೂಲಕ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ. ನಾಲ್ಕನೇ ಗ್ಯಾರಂಟಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ನೀಡಲಾಗುವುದು. ಡಿಪ್ಲೊಮಾ ಪದವೀಧರರಿಗೆ ಒಂದೂವರೆ ಸಾವಿರ ರೂಪಾಯಿ ನೀಡುತ್ತಾರಂತೆ. ಐದನೇ ಗ್ಯಾರಂಟಿಯಾಗಿ ಎಲ್ಲ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣವನ್ನು ಕಾಂಗ್ರೆಸ್​ ಘೋಷಿಸಿದೆ.

62 ಸಾವಿರ ಕೋಟಿ ರೂ. ಹೊರೆ : ಅಂದಹಾಗೆ ಈ ಗ್ಯಾರಂಟಿಗಳನ್ನು ಈಡೆರಿಸಲು ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 62 ಸಾವಿರ ಕೋಟಿ ರೂ. ಅವಶ್ಯಕತೆ ಇದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಕಾಪಾಡಿಕೊಂಡು ಐದು ಗ್ಯಾರಂಟಿಗಳನ್ನು ಕಾಂಗ್ರೆಸ್​ ಹೇಗೆ ಜಾರಿಗೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

lokesh

Recent Posts

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

23 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

26 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

28 mins ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

3 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

3 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

3 hours ago