BREAKING NEWS

ಕಾಂಗ್ರೆಸ್​ ಗ್ಯಾರಂಟಿ ಜಾರಿಗೆ ಸಿದ್ಧತೆ : ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಸಭೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್​ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್​ ಸಿದ್ಧತೆ ನಡೆಸಿದೆ. ಈ ಸಂಬಂಧ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಗ್ರಹಣಕ್ಕೂ ಮುನ್ನ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.

ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಐ.ಎಸ್.ಎನ್​.​ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಮುಂದಾಗಿದ್ದು, ಅದಕ್ಕೂ ಮುನ್ನ ಈಗ ಅಧಿಕಾರಿಗಳ ಜತೆ ನಿಯೋಜಿತ ಸಿಎಂ ಚರ್ಚಿಸಿದ್ದಾರೆ.

ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಯಾವುವು? : ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತರುತ್ತೇವೆ ಎಂದು ಕಾಂಗ್ರೆಸ್​ ಹೇಳಿದೆ. ಈ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂಪಾಯಿ ಅಕೌಂಟ್ ಸೇರಲಿದೆ ಎಂದು ಭರವಸೆ ನೀಡಿದೆ. ಎರಡನೇ ಗ್ಯಾರಂಟಿಯಾಗಿ ಮನೆ ಮನೆಗೂ 200 ಯೂನಿಟ್ ವಿದ್ಯುತ್ ಉಚಿತ ನೀಡುತ್ತಾರಂತೆ. ಮೂರನೇ ಗ್ಯಾರಂಟಿ ಏನೆಂದರೆ, ಅನ್ನ ಭಾಗ್ಯದ ಮೂಲಕ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ. ನಾಲ್ಕನೇ ಗ್ಯಾರಂಟಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ನೀಡಲಾಗುವುದು. ಡಿಪ್ಲೊಮಾ ಪದವೀಧರರಿಗೆ ಒಂದೂವರೆ ಸಾವಿರ ರೂಪಾಯಿ ನೀಡುತ್ತಾರಂತೆ. ಐದನೇ ಗ್ಯಾರಂಟಿಯಾಗಿ ಎಲ್ಲ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣವನ್ನು ಕಾಂಗ್ರೆಸ್​ ಘೋಷಿಸಿದೆ.

62 ಸಾವಿರ ಕೋಟಿ ರೂ. ಹೊರೆ : ಅಂದಹಾಗೆ ಈ ಗ್ಯಾರಂಟಿಗಳನ್ನು ಈಡೆರಿಸಲು ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 62 ಸಾವಿರ ಕೋಟಿ ರೂ. ಅವಶ್ಯಕತೆ ಇದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಕಾಪಾಡಿಕೊಂಡು ಐದು ಗ್ಯಾರಂಟಿಗಳನ್ನು ಕಾಂಗ್ರೆಸ್​ ಹೇಗೆ ಜಾರಿಗೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

lokesh

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

6 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

9 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

9 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

9 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

9 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

9 hours ago