ನವದೆಹಲಿ : ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಪಕ್ಷ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ, ಮುಂಬರುವ ಸಾರ್ವತ್ರಿಕ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಾಂಗಿಯಾಗಿ ಎದುರಿಸಲು ಉದ್ದೇಶಿಸಿದೆ ಎಂದು ಬುಧವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಪಕ್ಷದ ಸಿದ್ಧತೆಗಳು ಭರದಿಂದ ಸಾಗುತ್ತಿವೆ ಎಂದು ಹೇಳಿದರು.
“ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಕಾರಣ, ನಮ್ಮ ಸಿದ್ಧತೆಗಳು ಭರದಿಂದ ಸಾಗುತ್ತಿವೆ ಮತ್ತು ನಾವು ದೇಶಾದ್ಯಂತ ಸಭೆಗಳನ್ನು ನಡೆಸುತ್ತಿದ್ದೇವೆ” ಎಂದು ಅವರು ತಿಳಿಸಿದರು.
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಎನ್ಡಿಎ ಹಾಗೂ ಐಎನ್ಡಿಐಎ (INDIA) ಸಭೆಗಳನ್ನು ನಡೆಸಿರುವ ಬೆನ್ನಲ್ಲೇ ಮಾಯಾವತಿ ಅವರ ಈ ಹೇಳಿಕೆಗಳು ಹೊರ ಬಂದಿವೆ.
ಇದಲ್ಲದೆ, ಐಎನ್ಡಿಐಎ ಮತ್ತು ಎನ್ಡಿಎ ಮೈತ್ರಿಕೂಟದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ಅವರು, ಕಾಂಗ್ರೆಸ್ನ ಭರವಸೆಗಳು “ಪೊಳ್ಳು” ಎಂದು ಬಣ್ಣಿಸಿದ್ದಾರೆ. ‘ಈ ಪಕ್ಷಗಳು ದಲಿತರಿಗೆ ಏನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷದ ಭರವಸೆಗಳು ಯಾವಾಗಲೂ ಪೊಳ್ಳಾಗಿರುತ್ತವೆ. ಜಾತಿವಾದಿ ಪಕ್ಷಗಳೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುತ್ತಿದೆ. ಇದು ಜಾತಿವಾದಿ ಪಕ್ಷಗಳ ಮೈತ್ರಿ’ ಎಂದು ಅವರು ಹೇಳಿದ್ದಾರೆ.
ತಮ್ಮ ಪಕ್ಷವು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣಗಳಲ್ಲಿ ಸ್ವಂತ ಬಲದ ಮೇಲೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಮತ್ತು ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…