BREAKING NEWS

ಇಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು : ಕಾವಾಡಿ ದಂಪತಿ ಬೊಮ್ಮ ಬೆಳ್ಳಿ ಜೊತೆ ಸಂವಾದ

ಮೈಸೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇಂದು ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಹೆಲಿಕಾಪ್ಟರ್​ನಲ್ಲಿ ತಮಿಳುನಾಡಿಗೆ ತೆರಳಲಿದ್ದಾರೆ. ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ ನಡೆಸಲಿದ್ದಾರೆ. ಬಳಿಕ ಸಂಜೆ 5:45ಕ್ಕೆ ಮೈಸೂರಿಗೆ ಆಗಮಿಸಿ ಚೆನ್ನೈಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿ ಮುರ್ಮು ಅವರ ಸ್ವಾಗತ ಕೋರಲು ಸಿದ್ಧತೆ ಮಾಡಿಕೊಂಡಿದೆ.

ಇನ್ನು ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರದಲ್ಲಿ ಆಸ್ಕರ್ ವಿಜೇತ, ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿ ವಾಸ ಮಾಡುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೊಮ್ಮನ್ ದಂಪತಿಯನ್ನು ಭೇಟಿ ಮಾಡಲಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತೆಪ್ಪಕಾಡಿಗೆ ಭೇಟಿ ಕೊಟ್ಟಿದ್ದರು.

ಮತ್ತೊಂದೆಡೆ ಮಧುಮಲೈ ಬಳಿಯ ತೆಪ್ಪಕಾಡು ಆನೆ ಶಿಬಿರ ಗುಂಡ್ಲುಪೇಟೆ ಗಡಿಭಾಗದಲ್ಲಿ ಬರುವುದರಿಂದ ಜೊತೆಗೆ ಪ್ರವಾಸ ಮಾರ್ಗ ದಿಢೀರ್ ಬದಲಾಗಿ ರಸ್ತೆ ಮಾರ್ಗದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಚರಿಸಬೇಹುದಾದ ಪ್ರಮೇಯ ಬರಬಹುದೆಂದು ಮುನ್ನೆಚ್ಚರಿಕಾ ಕ್ರಮವಾಗಿ ಗುಂಡ್ಲುಪೇಟೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.‌ ಮೈಸೂರಿನಿಂದ ಬಂಡೀಪುರದ ಗಡಿವರೆಗೆ ರಾಷ್ಟ್ರಪತಿಗಳ ಕಾನ್ವೆ ಶುಕ್ರವಾರ ಸಂಜೆ ಪೂರ್ವ ತಾಲೀಮು ನಡೆಸಿದ್ದು, ಗುಂಡ್ಲುಪೇಟೆ ಹೊರವಲಯದಲ್ಲಿ ಈಗಾಗಲೇ ಹೆಲಿಪ್ಯಾಡ್ ಅನ್ನು ನಿರ್ಮಾಣ ಮಾಡಲಾಗಿದೆ.

lokesh

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

15 mins ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

40 mins ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

54 mins ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

1 hour ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

2 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

2 hours ago