ಮೈಸೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇಂದು ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಹೆಲಿಕಾಪ್ಟರ್ನಲ್ಲಿ ತಮಿಳುನಾಡಿಗೆ ತೆರಳಲಿದ್ದಾರೆ. ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ ನಡೆಸಲಿದ್ದಾರೆ. ಬಳಿಕ ಸಂಜೆ 5:45ಕ್ಕೆ ಮೈಸೂರಿಗೆ ಆಗಮಿಸಿ ಚೆನ್ನೈಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿ ಮುರ್ಮು ಅವರ ಸ್ವಾಗತ ಕೋರಲು ಸಿದ್ಧತೆ ಮಾಡಿಕೊಂಡಿದೆ.
ಇನ್ನು ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರದಲ್ಲಿ ಆಸ್ಕರ್ ವಿಜೇತ, ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿ ವಾಸ ಮಾಡುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೊಮ್ಮನ್ ದಂಪತಿಯನ್ನು ಭೇಟಿ ಮಾಡಲಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತೆಪ್ಪಕಾಡಿಗೆ ಭೇಟಿ ಕೊಟ್ಟಿದ್ದರು.
ಮತ್ತೊಂದೆಡೆ ಮಧುಮಲೈ ಬಳಿಯ ತೆಪ್ಪಕಾಡು ಆನೆ ಶಿಬಿರ ಗುಂಡ್ಲುಪೇಟೆ ಗಡಿಭಾಗದಲ್ಲಿ ಬರುವುದರಿಂದ ಜೊತೆಗೆ ಪ್ರವಾಸ ಮಾರ್ಗ ದಿಢೀರ್ ಬದಲಾಗಿ ರಸ್ತೆ ಮಾರ್ಗದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಚರಿಸಬೇಹುದಾದ ಪ್ರಮೇಯ ಬರಬಹುದೆಂದು ಮುನ್ನೆಚ್ಚರಿಕಾ ಕ್ರಮವಾಗಿ ಗುಂಡ್ಲುಪೇಟೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮೈಸೂರಿನಿಂದ ಬಂಡೀಪುರದ ಗಡಿವರೆಗೆ ರಾಷ್ಟ್ರಪತಿಗಳ ಕಾನ್ವೆ ಶುಕ್ರವಾರ ಸಂಜೆ ಪೂರ್ವ ತಾಲೀಮು ನಡೆಸಿದ್ದು, ಗುಂಡ್ಲುಪೇಟೆ ಹೊರವಲಯದಲ್ಲಿ ಈಗಾಗಲೇ ಹೆಲಿಪ್ಯಾಡ್ ಅನ್ನು ನಿರ್ಮಾಣ ಮಾಡಲಾಗಿದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…