ಮೈಸೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇಂದು ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಹೆಲಿಕಾಪ್ಟರ್ನಲ್ಲಿ ತಮಿಳುನಾಡಿಗೆ ತೆರಳಲಿದ್ದಾರೆ. ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ ನಡೆಸಲಿದ್ದಾರೆ. ಬಳಿಕ ಸಂಜೆ 5:45ಕ್ಕೆ ಮೈಸೂರಿಗೆ ಆಗಮಿಸಿ ಚೆನ್ನೈಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿ ಮುರ್ಮು ಅವರ ಸ್ವಾಗತ ಕೋರಲು ಸಿದ್ಧತೆ ಮಾಡಿಕೊಂಡಿದೆ.
ಇನ್ನು ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರದಲ್ಲಿ ಆಸ್ಕರ್ ವಿಜೇತ, ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿ ವಾಸ ಮಾಡುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೊಮ್ಮನ್ ದಂಪತಿಯನ್ನು ಭೇಟಿ ಮಾಡಲಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತೆಪ್ಪಕಾಡಿಗೆ ಭೇಟಿ ಕೊಟ್ಟಿದ್ದರು.
ಮತ್ತೊಂದೆಡೆ ಮಧುಮಲೈ ಬಳಿಯ ತೆಪ್ಪಕಾಡು ಆನೆ ಶಿಬಿರ ಗುಂಡ್ಲುಪೇಟೆ ಗಡಿಭಾಗದಲ್ಲಿ ಬರುವುದರಿಂದ ಜೊತೆಗೆ ಪ್ರವಾಸ ಮಾರ್ಗ ದಿಢೀರ್ ಬದಲಾಗಿ ರಸ್ತೆ ಮಾರ್ಗದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಚರಿಸಬೇಹುದಾದ ಪ್ರಮೇಯ ಬರಬಹುದೆಂದು ಮುನ್ನೆಚ್ಚರಿಕಾ ಕ್ರಮವಾಗಿ ಗುಂಡ್ಲುಪೇಟೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮೈಸೂರಿನಿಂದ ಬಂಡೀಪುರದ ಗಡಿವರೆಗೆ ರಾಷ್ಟ್ರಪತಿಗಳ ಕಾನ್ವೆ ಶುಕ್ರವಾರ ಸಂಜೆ ಪೂರ್ವ ತಾಲೀಮು ನಡೆಸಿದ್ದು, ಗುಂಡ್ಲುಪೇಟೆ ಹೊರವಲಯದಲ್ಲಿ ಈಗಾಗಲೇ ಹೆಲಿಪ್ಯಾಡ್ ಅನ್ನು ನಿರ್ಮಾಣ ಮಾಡಲಾಗಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…