BREAKING NEWS

ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ನೀಡಲು ಒತ್ತಡ : ಪಾಲಿಕೆ ಸದಸ್ಯರು ಪದಾಧಿಕಾರಿಗಳ ರಾಜೀನಾಮೆ

ಹುಬ್ಬಳ್ಳಿ : ಹು–ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಮುಂದುವರಿಸಿರುವ ಅವರ ಬೆಂಬಲಿಗರು, ಇದೀಗ ರಾಜೀನಾಮೆ ತಂತ್ರದ ಮೊರೆ ಹೋಗಿದ್ದಾರೆ.

ಕ್ಷೇತ್ರದಿಂದ ಮಹಾನಗರ ಪಾಲಿಕೆಗೆ ಆಯ್ಕೆಯಾಗಿರುವ 16 ಬಿಜೆಪಿ ಸದಸ್ಯರು ತಮ್ಮ ಸದಸ್ಯತ್ವಕ್ಕೆ ಹಾಗೂ ಪಕ್ಷದ 49 ಪದಾಧಿಕಾರಿಗಳು ಶುಕ್ರವಾರ ತಮ್ಮ ಹುದ್ದೆಗೆ ಸಾಮೂಹಿಕವಾಗಿ ರಾಜೀನಾಮೆ ಪತ್ರಕ್ಕೆ ಸಹಿ ಮಾಡಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ್ ಕಟೀಲ್ ಅವರಿಗೆ ಕಳಿಸಿದ್ದಾರೆ.

ಅದಕ್ಕೂ ಮುಂಚೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು, ಮಯೂರಿ ಗಾರ್ಡನ್‌ನಲ್ಲಿರುವ ಅವರ ನಿವಾಸದಲ್ಲಿ ನಿಯೋಗದ ಸದಸ್ಯರು ಭೇಟಿ ಮಾಡಿದ್ದರು. ‘ಶೆಟ್ಟರ್‌ಗೆ ಟಿಕೆಟ್ ಕೊಡಿಸಬೇಕು’ ಎಂದು ಮನವಿ ಮಾಡಿದ್ದ ಸದಸ್ಯರು, ‘ಒಂದು ವೇಳೆ ಟಿಕೆಟ್ ನೀಡದಿದ್ದರೆ ಎಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದರು.

ರಾಜೀನಾಮೆ ಸಲ್ಲಿಸಿದವರು :  ಮಹಾನಗರ ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ ಗುಂಡೂರು, ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ತಿಪ್ಪಣ್ಣ ಮಜ್ಜಗಿ, ಸೀಮಾ ಮೊಗಲಿಶೆಟ್ಟರ, ಸಂತೋಷ ಚವ್ಹಾಣ, ಮಹಾದೇವಪ್ಪ ನರಗುಂದ, ಬೀರಪ್ಪ ಖಂಡೇಕರ, ವೀರಣ್ಣ ಸವಡಿ, ರೂಪಾ ಶೆಟ್ಟಿ, ಕಿಶನ್ ಬೆಳಗಾವಿ, ವೀಣಾ ಭರದ್ವಾಡ, ಸರಸ್ವತಿ ಧೋಂಗಡಿ, ಚಂದ್ರಿಕಾ ಮೇಸ್ತ್ರಿ ಹಾಗೂ ಮೀನಾಕ್ಷಿ ವಂಟಮೂರಿ ಮಹಾನಗರ ಪಾಲಿಕೆಯ ಸದಸ್ವತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಪದಾಧಿಕಾರಿಗಳು : ಪಕ್ಷದ ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತಾಳ, ಮಹಿಳಾ ಮೋರ್ಚಾ ಕಾರ್ಯದರ್ಶಿ ಮೇನಕಾ ಹುರಳಿ, ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಎಂ.ಎಚ್. ಚಳ್ಳಮರದ ಶೇಖ, ಮಹಾನಗರ ರೈತ ಮೋರ್ಚಾ ಅಧ್ಯಕ್ಷ ಈಶ್ವರಗೌಡ ಪಾಟೀಲ, ಸೆಂಟ್ರಲ್ ಕ್ಷೇತ್ರ ರೈತ ಮೋರ್ಚಾ ಅಧ್ಯಕ್ಷ ಬಸವರಾಜ ಮುಳ್ಳೊಳ್ಳಿ, ಪ್ರಧಾನ ಕಾರ್ಯದರ್ಶಿ ಕೆ.ಎಚ್. ಮಾಡಳ್ಳಿ, ರಾಜ್ಯ ಪ್ರಕಾಶನ ಪ್ರಕೋಷ್ಠದ ಸದಸ್ಯ ಶ್ರೀನಿವಾಸ ಶಾಸ್ತ್ರಿ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ಇತರ ಪದಾಧಿಕಾರಿಗಳಾದ ವಿರೂಪಾಕ್ಷ ರಾಯನಗೌಡ್ರ, ಮೋಹನ ಬಡಿಗೇರ, ಡಿ.ಪಿ. ಪಾಟೀಲ, ಸದಾಶಿವ ಚೌಶೆಟ್ಟಿ, ಮುಕುಂದಗೌಡ ಗುಗ್ರಿ, ಲೀಲಾವತಿ ಪಾಸ್ತೆ, ರಂಜನ ಬಂಕಾಪುರ, ನಾಗರಾಜ ಮರಾಠೆ, ಹರೀಶ ಜಂಗ್ಲಿ, ಸಂಗೀತಾ ಇಜಾರದ, ಗಂಗಾ ಅಂಗಡಿ, ರಾಜು ಭಂಡಾರಿ, ಮಂಜು ದಲಬಂಜನ, ರವಿ ಕಲಾಲ, ಶಿವಾಜಿ ಪರಪ್ಪನವರ, ಪ್ರವೀಣ ಹುರಳಿ, ರಾಮನಾಥ ಶೆಣೈ, ಮಲ್ಲಿಕಾರ್ಜುನ ಸಾವಕಾರ, ನಾಗೇಶ ಕಲಬುರ್ಗಿ, ವಿಜಯಲಕ್ಷ್ಮಿ ತಿಮ್ಮೊಲಿ, ನಾಸೀರ ತಂಬೂರಿ, ಮುಸ್ತಾಕ ಕುಂಬಿ, ವಿವೇಕ ಹಳ್ಳಿ, ಅಬ್ದುಲ್ ಐನಾಪುರ, ಕುಮಾರ ಬುರಬುರೆ, ಇರ್ಫಾನ್ ಶೇಕ್, ಆಸೀಫ್ ಸೂರಣಗಿ, ಇಮ್ತಿಯಾಜ್ ಮುಲ್ಲಾ, ಹಟೇಲಸಾಬ ಮುಲ್ಲಾ, ಅಕ್ಕಮ್ಮ ಹೆಗಡೆ, ಕೃಷ್ಣ ಹಂದಿಗೋಳ, ಲಲಿತಾ ಪೂಜಾರಿ, ರತ್ನಾ ಚೌಶೆಟ್ಟಿ, ಜಯಶ್ರೀ ನಿಂಬರಗಿ, ಭಾರತಿ ಟಪಾಲ, ಮೇಘನಾ ಶಿಂಧೆ, ಶೋಭಾ ಪಾಟೀಲ, ಅಕ್ಕಮ್ಮ ಬಾಗೇವಾಡಿ, ಅನ್ನಪೂರ್ಣ ಪಾಟೀಲ, ಸಪ್ನಾ ಶಿಂಧೆ ಹಾಗೂ ಸುಮಾ ಶಿವನಗೌಡ್ರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

lokesh

Recent Posts

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

26 mins ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

36 mins ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

2 hours ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

3 hours ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

4 hours ago