BREAKING NEWS

ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ನೀಡಲು ಒತ್ತಡ : ಪಾಲಿಕೆ ಸದಸ್ಯರು ಪದಾಧಿಕಾರಿಗಳ ರಾಜೀನಾಮೆ

ಹುಬ್ಬಳ್ಳಿ : ಹು–ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಮುಂದುವರಿಸಿರುವ ಅವರ ಬೆಂಬಲಿಗರು, ಇದೀಗ ರಾಜೀನಾಮೆ ತಂತ್ರದ ಮೊರೆ ಹೋಗಿದ್ದಾರೆ.

ಕ್ಷೇತ್ರದಿಂದ ಮಹಾನಗರ ಪಾಲಿಕೆಗೆ ಆಯ್ಕೆಯಾಗಿರುವ 16 ಬಿಜೆಪಿ ಸದಸ್ಯರು ತಮ್ಮ ಸದಸ್ಯತ್ವಕ್ಕೆ ಹಾಗೂ ಪಕ್ಷದ 49 ಪದಾಧಿಕಾರಿಗಳು ಶುಕ್ರವಾರ ತಮ್ಮ ಹುದ್ದೆಗೆ ಸಾಮೂಹಿಕವಾಗಿ ರಾಜೀನಾಮೆ ಪತ್ರಕ್ಕೆ ಸಹಿ ಮಾಡಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ್ ಕಟೀಲ್ ಅವರಿಗೆ ಕಳಿಸಿದ್ದಾರೆ.

ಅದಕ್ಕೂ ಮುಂಚೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು, ಮಯೂರಿ ಗಾರ್ಡನ್‌ನಲ್ಲಿರುವ ಅವರ ನಿವಾಸದಲ್ಲಿ ನಿಯೋಗದ ಸದಸ್ಯರು ಭೇಟಿ ಮಾಡಿದ್ದರು. ‘ಶೆಟ್ಟರ್‌ಗೆ ಟಿಕೆಟ್ ಕೊಡಿಸಬೇಕು’ ಎಂದು ಮನವಿ ಮಾಡಿದ್ದ ಸದಸ್ಯರು, ‘ಒಂದು ವೇಳೆ ಟಿಕೆಟ್ ನೀಡದಿದ್ದರೆ ಎಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದರು.

ರಾಜೀನಾಮೆ ಸಲ್ಲಿಸಿದವರು :  ಮಹಾನಗರ ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ ಗುಂಡೂರು, ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ತಿಪ್ಪಣ್ಣ ಮಜ್ಜಗಿ, ಸೀಮಾ ಮೊಗಲಿಶೆಟ್ಟರ, ಸಂತೋಷ ಚವ್ಹಾಣ, ಮಹಾದೇವಪ್ಪ ನರಗುಂದ, ಬೀರಪ್ಪ ಖಂಡೇಕರ, ವೀರಣ್ಣ ಸವಡಿ, ರೂಪಾ ಶೆಟ್ಟಿ, ಕಿಶನ್ ಬೆಳಗಾವಿ, ವೀಣಾ ಭರದ್ವಾಡ, ಸರಸ್ವತಿ ಧೋಂಗಡಿ, ಚಂದ್ರಿಕಾ ಮೇಸ್ತ್ರಿ ಹಾಗೂ ಮೀನಾಕ್ಷಿ ವಂಟಮೂರಿ ಮಹಾನಗರ ಪಾಲಿಕೆಯ ಸದಸ್ವತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಪದಾಧಿಕಾರಿಗಳು : ಪಕ್ಷದ ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತಾಳ, ಮಹಿಳಾ ಮೋರ್ಚಾ ಕಾರ್ಯದರ್ಶಿ ಮೇನಕಾ ಹುರಳಿ, ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಎಂ.ಎಚ್. ಚಳ್ಳಮರದ ಶೇಖ, ಮಹಾನಗರ ರೈತ ಮೋರ್ಚಾ ಅಧ್ಯಕ್ಷ ಈಶ್ವರಗೌಡ ಪಾಟೀಲ, ಸೆಂಟ್ರಲ್ ಕ್ಷೇತ್ರ ರೈತ ಮೋರ್ಚಾ ಅಧ್ಯಕ್ಷ ಬಸವರಾಜ ಮುಳ್ಳೊಳ್ಳಿ, ಪ್ರಧಾನ ಕಾರ್ಯದರ್ಶಿ ಕೆ.ಎಚ್. ಮಾಡಳ್ಳಿ, ರಾಜ್ಯ ಪ್ರಕಾಶನ ಪ್ರಕೋಷ್ಠದ ಸದಸ್ಯ ಶ್ರೀನಿವಾಸ ಶಾಸ್ತ್ರಿ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ಇತರ ಪದಾಧಿಕಾರಿಗಳಾದ ವಿರೂಪಾಕ್ಷ ರಾಯನಗೌಡ್ರ, ಮೋಹನ ಬಡಿಗೇರ, ಡಿ.ಪಿ. ಪಾಟೀಲ, ಸದಾಶಿವ ಚೌಶೆಟ್ಟಿ, ಮುಕುಂದಗೌಡ ಗುಗ್ರಿ, ಲೀಲಾವತಿ ಪಾಸ್ತೆ, ರಂಜನ ಬಂಕಾಪುರ, ನಾಗರಾಜ ಮರಾಠೆ, ಹರೀಶ ಜಂಗ್ಲಿ, ಸಂಗೀತಾ ಇಜಾರದ, ಗಂಗಾ ಅಂಗಡಿ, ರಾಜು ಭಂಡಾರಿ, ಮಂಜು ದಲಬಂಜನ, ರವಿ ಕಲಾಲ, ಶಿವಾಜಿ ಪರಪ್ಪನವರ, ಪ್ರವೀಣ ಹುರಳಿ, ರಾಮನಾಥ ಶೆಣೈ, ಮಲ್ಲಿಕಾರ್ಜುನ ಸಾವಕಾರ, ನಾಗೇಶ ಕಲಬುರ್ಗಿ, ವಿಜಯಲಕ್ಷ್ಮಿ ತಿಮ್ಮೊಲಿ, ನಾಸೀರ ತಂಬೂರಿ, ಮುಸ್ತಾಕ ಕುಂಬಿ, ವಿವೇಕ ಹಳ್ಳಿ, ಅಬ್ದುಲ್ ಐನಾಪುರ, ಕುಮಾರ ಬುರಬುರೆ, ಇರ್ಫಾನ್ ಶೇಕ್, ಆಸೀಫ್ ಸೂರಣಗಿ, ಇಮ್ತಿಯಾಜ್ ಮುಲ್ಲಾ, ಹಟೇಲಸಾಬ ಮುಲ್ಲಾ, ಅಕ್ಕಮ್ಮ ಹೆಗಡೆ, ಕೃಷ್ಣ ಹಂದಿಗೋಳ, ಲಲಿತಾ ಪೂಜಾರಿ, ರತ್ನಾ ಚೌಶೆಟ್ಟಿ, ಜಯಶ್ರೀ ನಿಂಬರಗಿ, ಭಾರತಿ ಟಪಾಲ, ಮೇಘನಾ ಶಿಂಧೆ, ಶೋಭಾ ಪಾಟೀಲ, ಅಕ್ಕಮ್ಮ ಬಾಗೇವಾಡಿ, ಅನ್ನಪೂರ್ಣ ಪಾಟೀಲ, ಸಪ್ನಾ ಶಿಂಧೆ ಹಾಗೂ ಸುಮಾ ಶಿವನಗೌಡ್ರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

lokesh

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

3 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

3 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

3 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

4 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

4 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

5 hours ago