BREAKING NEWS

ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ನೀಡಲು ಒತ್ತಡ : ಪಾಲಿಕೆ ಸದಸ್ಯರು ಪದಾಧಿಕಾರಿಗಳ ರಾಜೀನಾಮೆ

ಹುಬ್ಬಳ್ಳಿ : ಹು–ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಮುಂದುವರಿಸಿರುವ ಅವರ ಬೆಂಬಲಿಗರು, ಇದೀಗ ರಾಜೀನಾಮೆ ತಂತ್ರದ ಮೊರೆ ಹೋಗಿದ್ದಾರೆ.

ಕ್ಷೇತ್ರದಿಂದ ಮಹಾನಗರ ಪಾಲಿಕೆಗೆ ಆಯ್ಕೆಯಾಗಿರುವ 16 ಬಿಜೆಪಿ ಸದಸ್ಯರು ತಮ್ಮ ಸದಸ್ಯತ್ವಕ್ಕೆ ಹಾಗೂ ಪಕ್ಷದ 49 ಪದಾಧಿಕಾರಿಗಳು ಶುಕ್ರವಾರ ತಮ್ಮ ಹುದ್ದೆಗೆ ಸಾಮೂಹಿಕವಾಗಿ ರಾಜೀನಾಮೆ ಪತ್ರಕ್ಕೆ ಸಹಿ ಮಾಡಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ್ ಕಟೀಲ್ ಅವರಿಗೆ ಕಳಿಸಿದ್ದಾರೆ.

ಅದಕ್ಕೂ ಮುಂಚೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು, ಮಯೂರಿ ಗಾರ್ಡನ್‌ನಲ್ಲಿರುವ ಅವರ ನಿವಾಸದಲ್ಲಿ ನಿಯೋಗದ ಸದಸ್ಯರು ಭೇಟಿ ಮಾಡಿದ್ದರು. ‘ಶೆಟ್ಟರ್‌ಗೆ ಟಿಕೆಟ್ ಕೊಡಿಸಬೇಕು’ ಎಂದು ಮನವಿ ಮಾಡಿದ್ದ ಸದಸ್ಯರು, ‘ಒಂದು ವೇಳೆ ಟಿಕೆಟ್ ನೀಡದಿದ್ದರೆ ಎಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದರು.

ರಾಜೀನಾಮೆ ಸಲ್ಲಿಸಿದವರು :  ಮಹಾನಗರ ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ ಗುಂಡೂರು, ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ತಿಪ್ಪಣ್ಣ ಮಜ್ಜಗಿ, ಸೀಮಾ ಮೊಗಲಿಶೆಟ್ಟರ, ಸಂತೋಷ ಚವ್ಹಾಣ, ಮಹಾದೇವಪ್ಪ ನರಗುಂದ, ಬೀರಪ್ಪ ಖಂಡೇಕರ, ವೀರಣ್ಣ ಸವಡಿ, ರೂಪಾ ಶೆಟ್ಟಿ, ಕಿಶನ್ ಬೆಳಗಾವಿ, ವೀಣಾ ಭರದ್ವಾಡ, ಸರಸ್ವತಿ ಧೋಂಗಡಿ, ಚಂದ್ರಿಕಾ ಮೇಸ್ತ್ರಿ ಹಾಗೂ ಮೀನಾಕ್ಷಿ ವಂಟಮೂರಿ ಮಹಾನಗರ ಪಾಲಿಕೆಯ ಸದಸ್ವತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಪದಾಧಿಕಾರಿಗಳು : ಪಕ್ಷದ ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತಾಳ, ಮಹಿಳಾ ಮೋರ್ಚಾ ಕಾರ್ಯದರ್ಶಿ ಮೇನಕಾ ಹುರಳಿ, ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಎಂ.ಎಚ್. ಚಳ್ಳಮರದ ಶೇಖ, ಮಹಾನಗರ ರೈತ ಮೋರ್ಚಾ ಅಧ್ಯಕ್ಷ ಈಶ್ವರಗೌಡ ಪಾಟೀಲ, ಸೆಂಟ್ರಲ್ ಕ್ಷೇತ್ರ ರೈತ ಮೋರ್ಚಾ ಅಧ್ಯಕ್ಷ ಬಸವರಾಜ ಮುಳ್ಳೊಳ್ಳಿ, ಪ್ರಧಾನ ಕಾರ್ಯದರ್ಶಿ ಕೆ.ಎಚ್. ಮಾಡಳ್ಳಿ, ರಾಜ್ಯ ಪ್ರಕಾಶನ ಪ್ರಕೋಷ್ಠದ ಸದಸ್ಯ ಶ್ರೀನಿವಾಸ ಶಾಸ್ತ್ರಿ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ಇತರ ಪದಾಧಿಕಾರಿಗಳಾದ ವಿರೂಪಾಕ್ಷ ರಾಯನಗೌಡ್ರ, ಮೋಹನ ಬಡಿಗೇರ, ಡಿ.ಪಿ. ಪಾಟೀಲ, ಸದಾಶಿವ ಚೌಶೆಟ್ಟಿ, ಮುಕುಂದಗೌಡ ಗುಗ್ರಿ, ಲೀಲಾವತಿ ಪಾಸ್ತೆ, ರಂಜನ ಬಂಕಾಪುರ, ನಾಗರಾಜ ಮರಾಠೆ, ಹರೀಶ ಜಂಗ್ಲಿ, ಸಂಗೀತಾ ಇಜಾರದ, ಗಂಗಾ ಅಂಗಡಿ, ರಾಜು ಭಂಡಾರಿ, ಮಂಜು ದಲಬಂಜನ, ರವಿ ಕಲಾಲ, ಶಿವಾಜಿ ಪರಪ್ಪನವರ, ಪ್ರವೀಣ ಹುರಳಿ, ರಾಮನಾಥ ಶೆಣೈ, ಮಲ್ಲಿಕಾರ್ಜುನ ಸಾವಕಾರ, ನಾಗೇಶ ಕಲಬುರ್ಗಿ, ವಿಜಯಲಕ್ಷ್ಮಿ ತಿಮ್ಮೊಲಿ, ನಾಸೀರ ತಂಬೂರಿ, ಮುಸ್ತಾಕ ಕುಂಬಿ, ವಿವೇಕ ಹಳ್ಳಿ, ಅಬ್ದುಲ್ ಐನಾಪುರ, ಕುಮಾರ ಬುರಬುರೆ, ಇರ್ಫಾನ್ ಶೇಕ್, ಆಸೀಫ್ ಸೂರಣಗಿ, ಇಮ್ತಿಯಾಜ್ ಮುಲ್ಲಾ, ಹಟೇಲಸಾಬ ಮುಲ್ಲಾ, ಅಕ್ಕಮ್ಮ ಹೆಗಡೆ, ಕೃಷ್ಣ ಹಂದಿಗೋಳ, ಲಲಿತಾ ಪೂಜಾರಿ, ರತ್ನಾ ಚೌಶೆಟ್ಟಿ, ಜಯಶ್ರೀ ನಿಂಬರಗಿ, ಭಾರತಿ ಟಪಾಲ, ಮೇಘನಾ ಶಿಂಧೆ, ಶೋಭಾ ಪಾಟೀಲ, ಅಕ್ಕಮ್ಮ ಬಾಗೇವಾಡಿ, ಅನ್ನಪೂರ್ಣ ಪಾಟೀಲ, ಸಪ್ನಾ ಶಿಂಧೆ ಹಾಗೂ ಸುಮಾ ಶಿವನಗೌಡ್ರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

lokesh

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

13 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago