BREAKING NEWS

ವಿಎಚ್‌ಪಿ ಮೆರವಣಿಗೆಯಲ್ಲಿ ದ್ವೇಷ ಭಾಷಣ ಇರದಂತೆ ನೋಡಿಕೊಳ್ಳಿ: ಸುಪ್ರೀಂಕೋರ್ಟ್

ನವದೆಹಲಿ : ವಿಶ್ವ ಹಿಂದೂ ಪರಿಷದ್‌ ಮತ್ತು ಬಜರಂಗದಳವು ದಿಲ್ಲಿ-ಎನ್‌ಸಿಆರ್‌ ನಲ್ಲಿ ಆಯೋಜಿಸುವ ಪ್ರತಿಭಟನೆಗಳ ವೇಳೆ ಯಾವುದೇ ದ್ವೇಷದ ಭಾಷಣ ಅಥವಾ ಹಿಂಸೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ಇಂದು ನಿರ್ದೇಶನ ನೀಡಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್‌ ಪಡೆ ಅಥವಾ ಅರೆಸೇನಾ ಪಡೆಗಳನ್ನು ನಿಯೋಜಿಸಬೇಕು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ಎಸ್‌ ವಿ ಭಟ್ಟಿ ಅವರ ಪೀಠ ಹೇಳಿದೆ.

ವಿಹಿಂಪ ಮತ್ತು ಬಜರಂಗದಳ ದಿಲ್ಲಿ ಮತ್ತು ಎನ್‌ಸಿಆರ್‌ನಲ್ಲಿ 23 ಪ್ರತಿಭಟನೆಗಳನ್ನು ಘೋಷಿಸಿವೆ ಎಂದು ಪತ್ರಕರ್ತ ಶಹೀನ್‌ ಅಬ್ದುಲ್ಲಾ ಪರ ವಾದಿಸಿದ ಹಿರಿಯ ವಕೀಲ ಸಿ ಯು ಸಿಂಗ್‌ ನ್ಯಾಯಾಲಯದ ಗಮನ ಸೆಳೆದಾಗ ಮೇಲಿನ ಆದೇಶ ಹೊರಡಿಸಲಾಗಿದೆ.

ಜುಲೈ 31ರಂದು ನೂಹ್‌ ಎಂಬಲ್ಲಿ ವಿಹಿಂಪ ಮೆರವಣಿಗೆಯನ್ನು ಗುಂಪೊಂದು ತಡೆಯಲು ಯತ್ನಿಸಿದಾಗ ಉಂಟಾದ ಮತೀಯ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್‌ಗಳ ಸಹಿತ ಆರು ಜನರು ಗಾಯಗೊಂಡಿದ್ದರು. ಘಟನೆ ಸಂಬಂಧ ಇಲ್ಲಿಯ ತನಕ 116 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago