BREAKING NEWS

ವಿಎಚ್‌ಪಿ ಮೆರವಣಿಗೆಯಲ್ಲಿ ದ್ವೇಷ ಭಾಷಣ ಇರದಂತೆ ನೋಡಿಕೊಳ್ಳಿ: ಸುಪ್ರೀಂಕೋರ್ಟ್

ನವದೆಹಲಿ : ವಿಶ್ವ ಹಿಂದೂ ಪರಿಷದ್‌ ಮತ್ತು ಬಜರಂಗದಳವು ದಿಲ್ಲಿ-ಎನ್‌ಸಿಆರ್‌ ನಲ್ಲಿ ಆಯೋಜಿಸುವ ಪ್ರತಿಭಟನೆಗಳ ವೇಳೆ ಯಾವುದೇ ದ್ವೇಷದ ಭಾಷಣ ಅಥವಾ ಹಿಂಸೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ಇಂದು ನಿರ್ದೇಶನ ನೀಡಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್‌ ಪಡೆ ಅಥವಾ ಅರೆಸೇನಾ ಪಡೆಗಳನ್ನು ನಿಯೋಜಿಸಬೇಕು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ಎಸ್‌ ವಿ ಭಟ್ಟಿ ಅವರ ಪೀಠ ಹೇಳಿದೆ.

ವಿಹಿಂಪ ಮತ್ತು ಬಜರಂಗದಳ ದಿಲ್ಲಿ ಮತ್ತು ಎನ್‌ಸಿಆರ್‌ನಲ್ಲಿ 23 ಪ್ರತಿಭಟನೆಗಳನ್ನು ಘೋಷಿಸಿವೆ ಎಂದು ಪತ್ರಕರ್ತ ಶಹೀನ್‌ ಅಬ್ದುಲ್ಲಾ ಪರ ವಾದಿಸಿದ ಹಿರಿಯ ವಕೀಲ ಸಿ ಯು ಸಿಂಗ್‌ ನ್ಯಾಯಾಲಯದ ಗಮನ ಸೆಳೆದಾಗ ಮೇಲಿನ ಆದೇಶ ಹೊರಡಿಸಲಾಗಿದೆ.

ಜುಲೈ 31ರಂದು ನೂಹ್‌ ಎಂಬಲ್ಲಿ ವಿಹಿಂಪ ಮೆರವಣಿಗೆಯನ್ನು ಗುಂಪೊಂದು ತಡೆಯಲು ಯತ್ನಿಸಿದಾಗ ಉಂಟಾದ ಮತೀಯ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್‌ಗಳ ಸಹಿತ ಆರು ಜನರು ಗಾಯಗೊಂಡಿದ್ದರು. ಘಟನೆ ಸಂಬಂಧ ಇಲ್ಲಿಯ ತನಕ 116 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

47 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago