ನವದೆಹಲಿ: “ನಮ್ಮ ಸರ್ಕಾರವನ್ನು ಹೊರ ಹಾಕುವುದು ಇಂಡಿಯಾ ಮೈತ್ರಿಕೂಟದ ಗುರಿಯಾದರೆ, ದೇಶದ ಉಜ್ವಲ ಭವಿಷ್ಯ ಸೃಷ್ಠಿಸುವುದು ನಮ್ಮ ಸರ್ಕಾರದ ಕೆಲಸವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿಂದು (ಮಂಗಳವಾರ) ನಡೆಯುತ್ತಿರುವ ಇಂಡಿಯಾ ಬ್ಲಾಕ್ನ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.
ಕೆಲವು ಪಕ್ಷಗಳು ಸಂಸತ್ ಭದ್ರತಾ ಉಲ್ಲಂಘನೆಗೆ ಬೆಂಬಲ ನೀಡುತ್ತವೆ, ಇದು ಉಲ್ಲಂಘನೆಯಷ್ಟೇ ಅಪಾಯಕಾರಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳವರು ಎಲ್ಲರೂ ಈ ಲೋಪವನ್ನು ಖಂಡಿಸಬೇಕಿತ್ತು. ಇದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದರ ಸಂಖ್ಯೆ ಕಡಿಮೆಯಾಗುವ ಬಗ್ಗೆ ಸೂಚಿಸುತ್ತದೆ. ಮತ್ತು ಚುನಾವಣೆಯಲ್ಲಿ ಬಿಜೆಪಿ ಸಂಖ್ಯೆ ಲೋಕಸಭೆಯಲ್ಲಿ ಹೆಚ್ಚಾಗುತ್ತದೆ ಎಂದು ಇಂಡಿಯಾ ಬ್ಲಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಿಸೆಂಬರ್ 13 ರ ಭದ್ರತಾ ಉಲ್ಲಂಘನೆಯ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದವು. ಸಂಸತ್ತಿನಲ್ಲಿ ನಿನ್ನೆ ಭಾರೀ ಗದ್ದಲ-ಕೋಲಾಹಲ ಉಂಟಾದ ಹಿನ್ನಲೆ ಅಂತಿಮವಾಗಿ 78 ಸಂಸದರನ್ನು ಅಮಾನತುಗೊಳಿಸಲಾಯಿತು, ಭಾರತೀಯ ಸಂಸತ್ತಿನ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಹೊರಹಾಕಲಾಗಿದ್ದು ಇದೇ ಮೊದಲು.
ಇಂದು ಇತ್ತೀಚಿನ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರ ಪುನರ್ ರೂಪಿಸುವ ಕುರಿತು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ಇಂದು ನಡೆಯಲಿದೆ.
ಇದು ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆಯಾಗಿದೆ. ಇಂದಿನ ಸಭೆಯಲ್ಲಿ “ಮೇನ್ ನಹಿಂ, ಹಮ್ (ನಾವು, ನಾನಲ್ಲ)” ಎಂಬ ಥೀಮ್ನೊಂದಿಗೆ ಮುಂದುವರಿಯಲು ಪ್ರತಿಪಕ್ಷಗಳು ಉದ್ದೇಶಿಸಿವೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…