BREAKING NEWS

ಇಂಡಿಯಾ ಬ್ಲಾಕ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: “ನಮ್ಮ ಸರ್ಕಾರವನ್ನು ಹೊರ ಹಾಕುವುದು ಇಂಡಿಯಾ ಮೈತ್ರಿಕೂಟದ ಗುರಿಯಾದರೆ, ದೇಶದ ಉಜ್ವಲ ಭವಿಷ್ಯ ಸೃಷ್ಠಿಸುವುದು ನಮ್ಮ ಸರ್ಕಾರದ ಕೆಲಸವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೆಹಲಿಯಲ್ಲಿಂದು (ಮಂಗಳವಾರ) ನಡೆಯುತ್ತಿರುವ ಇಂಡಿಯಾ ಬ್ಲಾಕ್‌ನ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.

ಕೆಲವು ಪಕ್ಷಗಳು ಸಂಸತ್‌ ಭದ್ರತಾ ಉಲ್ಲಂಘನೆಗೆ ಬೆಂಬಲ ನೀಡುತ್ತವೆ, ಇದು ಉಲ್ಲಂಘನೆಯಷ್ಟೇ ಅಪಾಯಕಾರಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳವರು ಎಲ್ಲರೂ ಈ ಲೋಪವನ್ನು ಖಂಡಿಸಬೇಕಿತ್ತು. ಇದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದರ ಸಂಖ್ಯೆ ಕಡಿಮೆಯಾಗುವ ಬಗ್ಗೆ ಸೂಚಿಸುತ್ತದೆ. ಮತ್ತು ಚುನಾವಣೆಯಲ್ಲಿ ಬಿಜೆಪಿ ಸಂಖ್ಯೆ ಲೋಕಸಭೆಯಲ್ಲಿ ಹೆಚ್ಚಾಗುತ್ತದೆ ಎಂದು ಇಂಡಿಯಾ ಬ್ಲಾಕ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಿಸೆಂಬರ್ 13 ರ ಭದ್ರತಾ ಉಲ್ಲಂಘನೆಯ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದವು. ಸಂಸತ್ತಿನಲ್ಲಿ ನಿನ್ನೆ ಭಾರೀ ಗದ್ದಲ-ಕೋಲಾಹಲ ಉಂಟಾದ ಹಿನ್ನಲೆ ಅಂತಿಮವಾಗಿ 78 ಸಂಸದರನ್ನು ಅಮಾನತುಗೊಳಿಸಲಾಯಿತು, ಭಾರತೀಯ ಸಂಸತ್ತಿನ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಹೊರಹಾಕಲಾಗಿದ್ದು ಇದೇ ಮೊದಲು.

ಇಂದು ಇತ್ತೀಚಿನ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರ ಪುನರ್ ರೂಪಿಸುವ ಕುರಿತು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ಇಂದು ನಡೆಯಲಿದೆ.

ಇದು ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆಯಾಗಿದೆ. ಇಂದಿನ ಸಭೆಯಲ್ಲಿ “ಮೇನ್ ನಹಿಂ, ಹಮ್ (ನಾವು, ನಾನಲ್ಲ)” ಎಂಬ ಥೀಮ್‌ನೊಂದಿಗೆ ಮುಂದುವರಿಯಲು ಪ್ರತಿಪಕ್ಷಗಳು ಉದ್ದೇಶಿಸಿವೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago