ನವದೆಹಲಿ: “ನಮ್ಮ ಸರ್ಕಾರವನ್ನು ಹೊರ ಹಾಕುವುದು ಇಂಡಿಯಾ ಮೈತ್ರಿಕೂಟದ ಗುರಿಯಾದರೆ, ದೇಶದ ಉಜ್ವಲ ಭವಿಷ್ಯ ಸೃಷ್ಠಿಸುವುದು ನಮ್ಮ ಸರ್ಕಾರದ ಕೆಲಸವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿಂದು (ಮಂಗಳವಾರ) ನಡೆಯುತ್ತಿರುವ ಇಂಡಿಯಾ ಬ್ಲಾಕ್ನ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.
ಕೆಲವು ಪಕ್ಷಗಳು ಸಂಸತ್ ಭದ್ರತಾ ಉಲ್ಲಂಘನೆಗೆ ಬೆಂಬಲ ನೀಡುತ್ತವೆ, ಇದು ಉಲ್ಲಂಘನೆಯಷ್ಟೇ ಅಪಾಯಕಾರಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳವರು ಎಲ್ಲರೂ ಈ ಲೋಪವನ್ನು ಖಂಡಿಸಬೇಕಿತ್ತು. ಇದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದರ ಸಂಖ್ಯೆ ಕಡಿಮೆಯಾಗುವ ಬಗ್ಗೆ ಸೂಚಿಸುತ್ತದೆ. ಮತ್ತು ಚುನಾವಣೆಯಲ್ಲಿ ಬಿಜೆಪಿ ಸಂಖ್ಯೆ ಲೋಕಸಭೆಯಲ್ಲಿ ಹೆಚ್ಚಾಗುತ್ತದೆ ಎಂದು ಇಂಡಿಯಾ ಬ್ಲಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಿಸೆಂಬರ್ 13 ರ ಭದ್ರತಾ ಉಲ್ಲಂಘನೆಯ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದವು. ಸಂಸತ್ತಿನಲ್ಲಿ ನಿನ್ನೆ ಭಾರೀ ಗದ್ದಲ-ಕೋಲಾಹಲ ಉಂಟಾದ ಹಿನ್ನಲೆ ಅಂತಿಮವಾಗಿ 78 ಸಂಸದರನ್ನು ಅಮಾನತುಗೊಳಿಸಲಾಯಿತು, ಭಾರತೀಯ ಸಂಸತ್ತಿನ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಹೊರಹಾಕಲಾಗಿದ್ದು ಇದೇ ಮೊದಲು.
ಇಂದು ಇತ್ತೀಚಿನ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರ ಪುನರ್ ರೂಪಿಸುವ ಕುರಿತು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ಇಂದು ನಡೆಯಲಿದೆ.
ಇದು ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆಯಾಗಿದೆ. ಇಂದಿನ ಸಭೆಯಲ್ಲಿ “ಮೇನ್ ನಹಿಂ, ಹಮ್ (ನಾವು, ನಾನಲ್ಲ)” ಎಂಬ ಥೀಮ್ನೊಂದಿಗೆ ಮುಂದುವರಿಯಲು ಪ್ರತಿಪಕ್ಷಗಳು ಉದ್ದೇಶಿಸಿವೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…