BREAKING NEWS

ಭತ್ತದ ಗದ್ದೆಯಲ್ಲಿ ಸಿಲುಕಿದ ಪ್ರಧಾನಿ ಮೋದಿ ಭದ್ರತಾ ಪಡೆಯ ಹೆಲಿಕಾಪ್ಟರ್ : ಮೇಲೆತ್ತಲು ಪರದಾಟ

ರಾಯಚೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರಿಗೆ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತಾ ಸಿಬ್ಬಂದಿಯ ಸೇನಾ ಪಡೆಯ ಹೆಲಿಕಾಪ್ಟರ್‌ ಭತ್ತದ ಗದ್ದೆಯಲ್ಲಿ ಮಾಡಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಸಿಲುಕಿಕೊಂಡಿದೆ.

ಕರ್ನಾಟಕದ ಭತ್ತದ ಕಣಜ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಚಾರಕ್ಕೆ ಬೃಹತ್‌ ವೇದಿಕೆಯನ್ನು ಸಿದ್ಧಪಡಿಸಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸುತ್ತಿದ್ದ ನರೇಂದ್ರ ಮೋದಿ ಅವರಿಗೆ ಹೆಲಿಪ್ಯಾಡ್‌ ಸಿದ್ಧಪಡಿಸಲಾಗಿತ್ತು. ಆದರೆ, ಅವರ ಭದ್ರತಾ ಸಿಬ್ಬಂದಿಗೂ ಹೆಲಿಪ್ಯಾಡ್‌ ನಿರ್ಮಾಣ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರಿಂದ ತರಾತುರಿಯಲ್ಲಿ ಭತ್ತದ ಗದ್ದೆಯಲ್ಲಿ ಮಣ್ಣನ್ನು ಹಾಕಿ ಹೆಲಿಪ್ಯಾಡ್‌ ನಿರ್ಮಿಸಲಾಗಿತ್ತು. ಭಾರತೀಯ ಭದ್ರತಾ ಪಡೆಯ ಹೆಲಿಕಾಪ್ಟರ್‌ ಲ್ಯಾಂಡ್‌ ಆದ ತಕ್ಷಣ ಗದ್ದೆಯಲ್ಲಿ ಸಿಕ್ಕಿಕೊಂಡಿದೆ. ಸುಮಾರು 3 ಗಂಟೆಗಳಿಂದ ಹೆಲಿಕಾಪ್ಟರ್‌ ತೆರವು ಕಾರ್ಯಾಚರಣೆ ಮಾಡಲಾಗುತ್ತಿದ್ದರೂ ಸಫಲವಾಗಿಲ್ಲ.

lokesh

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

7 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

7 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

7 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

8 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

9 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

17 hours ago