BREAKING NEWS

ನವರಾತ್ರಿಗೆ ವಿಶೇಷ ‘ಗರ್ಬೊ’ ಗೀತೆಗೆ ಸಾಹಿತ್ಯ ರಚಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಈಗ ಗೀತ ರಚನೆಕಾರರಾಗಿದ್ದಾರೆ! ಬರವಣಿಗೆ ಮೇಲಿನ ಆಸಕ್ತಿಯನ್ನು ಅವರು ನವರಾತ್ರಿ ಹಾಡಿನ ಮೂಲಕ ಪ್ರದರ್ಶಿಸಿದ್ದಾರೆ. ‘ಗರ್ಬೊ’ ಎಂಬ ಶೀರ್ಷಿಕೆಯ ಹಬ್ಬದ ಹಾಡನ್ನು ಪ್ರಧಾನಿ ಮೋದಿ ರಚಿಸಿದ್ದಾರೆ. ಈ ಹಾಡನ್ನು ಗಾಯಕಿ ಧ್ವನಿ ಭಾನುಶಾಲಿ ಹಾಡಿದ್ದಾರೆ. ತನಿಷ್ಕ್ ಬಗ್ಚಿ ಸಂಗೀತ ನಿರ್ದೇಶನದ, ಜಾಕಿ ಭಗ್ನಾನಿ ನಿರ್ಮಾಣದ ಗೀತೆ ಎಲ್ಲರ ಗಮನ ಸೆಳೆದಿದೆ.

ಹೊಸ ನವರಾತ್ರಿ ಗೀತೆ ‘ಗರ್ಬೊ’ದ ಸಾಹಿತ್ಯವನ್ನು ಪ್ರಧಾನಿ ಮೋದಿ ಬರೆದಿದ್ದಾರೆ. ನವರಾತ್ರಿ ಸಂದರ್ಭದಲ್ಲಿನ ಏಕತೆ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಮತ್ತು ಹಬ್ಬದ ಚಟುವಟಿಕೆಗಳ ಕುರಿತು ಈ ಹಾಡಿನಲ್ಲಿ ಬಣ್ಣಿಸಿದ್ದಾರೆ. ಈ ಹಾಡಿಗೆ ದನಿಯಾಗಿರುವ ಧ್ವನಿ ಭಾನುಶಾಲಿ, ವಿಡಿಯೋದಲ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಶನಿವಾರ ಈ ಹಾಡು ಬಿಡುಗಡೆಯಾಗಿದ್ದು, ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://x.com/narendramodi/status/1713063193592086899?s=20

‘ಗರ್ಬೊ’ ಹಾಡಿನ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. ಗಾಯಕಿ ಧ್ವನಿ ಭಾನುಶಾಲಿ, ಸಂಗೀತ ನಿರ್ದೇಶಕ ತನಿಷ್ಕ್ ಬಗ್ಚಿ ಮತ್ತು ನಟ, ನಿರ್ಮಾಪಕ ಜಾಕಿ ಭಗ್ನಾನಿ ಸ್ಥಾಪಿಸಿದ ಜಸ್ಟ್ ಮ್ಯೂಸಿಕ್‌ನ ತಂಡಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ಕೆಲವು ವರ್ಷಗಳ ಹಿಂದೆ ಬರೆದ ಗರ್ಬಾದ ಈ ಸುಂದರ ಅರ್ಪಣೆಗಾಗಿ ಧ್ವನಿ ಭಾನುಶಾಲಿ, ತನಿಷ್ಕ್ ಬಗ್ಚಿ ಹಾಗೂ ಜಸ್ಟ್ ಮ್ಯೂಸಿಕ್ ತಂಡಕ್ಕ ಧನ್ಯವಾದಗಳು. ಇದು ಅನೇಕ ನೆನಪುಗಳನ್ನು ಮರಳಿಸಿದೆ. ನಾನು ಅನೇಕ ವರ್ಷಗಳಿಂದ ಬರೆದಿರಲಿಲ್ಲ. ಆದರೆ ಕಳೆದ ಕೆಲವು ದಿನಗಳಲ್ಲಿ ಹೊಸ ಗರ್ಬಾ ಗೀತೆಯನ್ನು ಬರೆಯವುದು ಸಾಧ್ಯವಾಗಿದೆ. ಅದನ್ನು ನಾನು ನವರಾತ್ರಿ ಸಂದರ್ಭದಲ್ಲಿ ಹಂಚಿಕೊಳ್ಳುತ್ತೇನೆ” ಎಂದು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಾಕಿ ಭಗ್ನಾನಿ, “ಪ್ರಧಾನಿ ನರೇಂದ್ರ ಮೋದಿ ಅವರೇ ನಮ್ಮ ಗರ್ಬಾ ಅರ್ಪಣೆಗಾಗಿ ನಿಮ್ಮ ಕರುಣೆಯ ಪದಗಳು ಮತ್ತು ಹೊಗಳಿಕೆಗಾಗಿ ಧನ್ಯವಾದಗಳು. ನಿಮ್ಮ ಬೆಂಬಲದಿಂದ ನಮಗೆ ನಿಜಕ್ಕೂ ಗೌರವ ದೊರಕಿದೆ. ನಿಮ್ಮ ಮಾತುಗಳು ನಮಗೆ ಸ್ಫೂರ್ತಿ ನೀಡಿವೆ. ಇದನ್ನು ಸೃಷ್ಟಿಸಲು ನಿಮ್ಮ ಸ್ಫೂರ್ತಿಯೇ ನಮಗೆ ಪ್ರೇರಣೆ ನೀಡಿದೆ” ಎಂದು ಹೇಳಿದ್ದಾರೆ.

ಈ ಗೀತೆಗೆ ಪ್ರತಿಕ್ರಿಯೆ ನೀಡಿರುವ ನಟಿ ಕಂಗನಾ ರಣಾವತ್, ಪ್ರಧಾನಿ ಮೋದಿ ಅವರು ಸ್ಫೂರ್ತಿದಾಯಕರು ಎಂದು ಶ್ಲಾಘಿಸಿದ್ದಾರೆ. “ಎಷ್ಟು ಸುಂದರ, ಅಟಲ್‌ (ವಾಜಪೇಯಿ) ಅವರ ಪದ್ಯಗಳು ಇರಬಹುದು ಅಥವಾ ನರೇಂದ್ರ ಮೋದಿ ಅವರ ಹಾಡುಗಳು/ ಪದ್ಯಗಳು ಮತ್ತು ಕಥೆ ಹೇಳುವಿಕೆಯು, ನಮ್ಮ ದಿಟ್ಟ ಹೀರೋಗಳು ಕಲೆಯ ಸೌಂದರ್ಯ ಹಾಗೂ ಸೊಬಗಿನಲ್ಲಿ ಭಾಗಿಯಾಗುವುದನ್ನು ನೋಡುವುದು ಯಾವಾಗಲೂ ಹೃದಯಸ್ಪರ್ಶಿಯಾಗಿರುತ್ತದೆ. ನವರಾತ್ರಿ 2023 ಗರ್ಬಾ, ಎಲ್ಲಾ ಕಲಾವಿದರಿಗೂ ಬಹಳ ಸ್ಫೂರ್ತಿದಾಯಕ” ಎಂದು ಹೇಳಿದ್ದಾರೆ.

andolanait

Recent Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

37 mins ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

2 hours ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

3 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

3 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

3 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

3 hours ago