BREAKING NEWS

ನವರಾತ್ರಿಗೆ ವಿಶೇಷ ‘ಗರ್ಬೊ’ ಗೀತೆಗೆ ಸಾಹಿತ್ಯ ರಚಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಈಗ ಗೀತ ರಚನೆಕಾರರಾಗಿದ್ದಾರೆ! ಬರವಣಿಗೆ ಮೇಲಿನ ಆಸಕ್ತಿಯನ್ನು ಅವರು ನವರಾತ್ರಿ ಹಾಡಿನ ಮೂಲಕ ಪ್ರದರ್ಶಿಸಿದ್ದಾರೆ. ‘ಗರ್ಬೊ’ ಎಂಬ ಶೀರ್ಷಿಕೆಯ ಹಬ್ಬದ ಹಾಡನ್ನು ಪ್ರಧಾನಿ ಮೋದಿ ರಚಿಸಿದ್ದಾರೆ. ಈ ಹಾಡನ್ನು ಗಾಯಕಿ ಧ್ವನಿ ಭಾನುಶಾಲಿ ಹಾಡಿದ್ದಾರೆ. ತನಿಷ್ಕ್ ಬಗ್ಚಿ ಸಂಗೀತ ನಿರ್ದೇಶನದ, ಜಾಕಿ ಭಗ್ನಾನಿ ನಿರ್ಮಾಣದ ಗೀತೆ ಎಲ್ಲರ ಗಮನ ಸೆಳೆದಿದೆ.

ಹೊಸ ನವರಾತ್ರಿ ಗೀತೆ ‘ಗರ್ಬೊ’ದ ಸಾಹಿತ್ಯವನ್ನು ಪ್ರಧಾನಿ ಮೋದಿ ಬರೆದಿದ್ದಾರೆ. ನವರಾತ್ರಿ ಸಂದರ್ಭದಲ್ಲಿನ ಏಕತೆ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಮತ್ತು ಹಬ್ಬದ ಚಟುವಟಿಕೆಗಳ ಕುರಿತು ಈ ಹಾಡಿನಲ್ಲಿ ಬಣ್ಣಿಸಿದ್ದಾರೆ. ಈ ಹಾಡಿಗೆ ದನಿಯಾಗಿರುವ ಧ್ವನಿ ಭಾನುಶಾಲಿ, ವಿಡಿಯೋದಲ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಶನಿವಾರ ಈ ಹಾಡು ಬಿಡುಗಡೆಯಾಗಿದ್ದು, ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://x.com/narendramodi/status/1713063193592086899?s=20

‘ಗರ್ಬೊ’ ಹಾಡಿನ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. ಗಾಯಕಿ ಧ್ವನಿ ಭಾನುಶಾಲಿ, ಸಂಗೀತ ನಿರ್ದೇಶಕ ತನಿಷ್ಕ್ ಬಗ್ಚಿ ಮತ್ತು ನಟ, ನಿರ್ಮಾಪಕ ಜಾಕಿ ಭಗ್ನಾನಿ ಸ್ಥಾಪಿಸಿದ ಜಸ್ಟ್ ಮ್ಯೂಸಿಕ್‌ನ ತಂಡಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ಕೆಲವು ವರ್ಷಗಳ ಹಿಂದೆ ಬರೆದ ಗರ್ಬಾದ ಈ ಸುಂದರ ಅರ್ಪಣೆಗಾಗಿ ಧ್ವನಿ ಭಾನುಶಾಲಿ, ತನಿಷ್ಕ್ ಬಗ್ಚಿ ಹಾಗೂ ಜಸ್ಟ್ ಮ್ಯೂಸಿಕ್ ತಂಡಕ್ಕ ಧನ್ಯವಾದಗಳು. ಇದು ಅನೇಕ ನೆನಪುಗಳನ್ನು ಮರಳಿಸಿದೆ. ನಾನು ಅನೇಕ ವರ್ಷಗಳಿಂದ ಬರೆದಿರಲಿಲ್ಲ. ಆದರೆ ಕಳೆದ ಕೆಲವು ದಿನಗಳಲ್ಲಿ ಹೊಸ ಗರ್ಬಾ ಗೀತೆಯನ್ನು ಬರೆಯವುದು ಸಾಧ್ಯವಾಗಿದೆ. ಅದನ್ನು ನಾನು ನವರಾತ್ರಿ ಸಂದರ್ಭದಲ್ಲಿ ಹಂಚಿಕೊಳ್ಳುತ್ತೇನೆ” ಎಂದು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಾಕಿ ಭಗ್ನಾನಿ, “ಪ್ರಧಾನಿ ನರೇಂದ್ರ ಮೋದಿ ಅವರೇ ನಮ್ಮ ಗರ್ಬಾ ಅರ್ಪಣೆಗಾಗಿ ನಿಮ್ಮ ಕರುಣೆಯ ಪದಗಳು ಮತ್ತು ಹೊಗಳಿಕೆಗಾಗಿ ಧನ್ಯವಾದಗಳು. ನಿಮ್ಮ ಬೆಂಬಲದಿಂದ ನಮಗೆ ನಿಜಕ್ಕೂ ಗೌರವ ದೊರಕಿದೆ. ನಿಮ್ಮ ಮಾತುಗಳು ನಮಗೆ ಸ್ಫೂರ್ತಿ ನೀಡಿವೆ. ಇದನ್ನು ಸೃಷ್ಟಿಸಲು ನಿಮ್ಮ ಸ್ಫೂರ್ತಿಯೇ ನಮಗೆ ಪ್ರೇರಣೆ ನೀಡಿದೆ” ಎಂದು ಹೇಳಿದ್ದಾರೆ.

ಈ ಗೀತೆಗೆ ಪ್ರತಿಕ್ರಿಯೆ ನೀಡಿರುವ ನಟಿ ಕಂಗನಾ ರಣಾವತ್, ಪ್ರಧಾನಿ ಮೋದಿ ಅವರು ಸ್ಫೂರ್ತಿದಾಯಕರು ಎಂದು ಶ್ಲಾಘಿಸಿದ್ದಾರೆ. “ಎಷ್ಟು ಸುಂದರ, ಅಟಲ್‌ (ವಾಜಪೇಯಿ) ಅವರ ಪದ್ಯಗಳು ಇರಬಹುದು ಅಥವಾ ನರೇಂದ್ರ ಮೋದಿ ಅವರ ಹಾಡುಗಳು/ ಪದ್ಯಗಳು ಮತ್ತು ಕಥೆ ಹೇಳುವಿಕೆಯು, ನಮ್ಮ ದಿಟ್ಟ ಹೀರೋಗಳು ಕಲೆಯ ಸೌಂದರ್ಯ ಹಾಗೂ ಸೊಬಗಿನಲ್ಲಿ ಭಾಗಿಯಾಗುವುದನ್ನು ನೋಡುವುದು ಯಾವಾಗಲೂ ಹೃದಯಸ್ಪರ್ಶಿಯಾಗಿರುತ್ತದೆ. ನವರಾತ್ರಿ 2023 ಗರ್ಬಾ, ಎಲ್ಲಾ ಕಲಾವಿದರಿಗೂ ಬಹಳ ಸ್ಫೂರ್ತಿದಾಯಕ” ಎಂದು ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago