BREAKING NEWS

ಜನರ ಸಂಕಷ್ಟಕ್ಕೆ ಬಾಯಿ ಬಿಡದ ಪ್ರಧಾನಿ, ಜಾತಿ-ಧರ್ಮ ವಿಷಯಕ್ಕೆ ಮಾತ್ರ ಮಾತನಾಡುತ್ತಾರೆ: ಪ್ರಿಯಾಂಕ ಗಾಂಧಿ

ಬೆಂಗಳೂರು: ರಾಜ್ಯದಲ್ಲಿ ಲೂಟಿ ನಡೆಯುವಾಗ ಪ್ರಧಾನಿ ಕಣ್ಣು ಮುಚ್ಚಿಕುಳಿತುಕೊಂಡು ಕನಸು ಕಾಣುತ್ತಿದ್ದರು. ಸರ್ವಜ್ಞಾನಿ, ಸರ್ವಾಂತರ್ಯಾಮಿ ಪ್ರಧಾನಿಗೆ ರಾಜ್ಯದಲ್ಲಿ ನಡೆಯುತ್ತಿರುವ ಲೂಟಿ ತಿಳಿಯಲಿಲ್ಲವೇ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪ್ರಶ್ನಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ ಪ್ರಚಾರ ಕಾರ್ಯದಲ್ಲಿ ಮಾತನಾಡಿದ ಅವರು,ಶೇ.40ರಷ್ಟು ಭ್ರಷ್ಟಚಾರದ ಬಗ್ಗೆ ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದ್ದರು. ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡರು. ಅದ್ಯಾವುದಕ್ಕೂ ಪ್ರತಿಕ್ರಿಯಿಸಲಿಲ್ಲ. ಈಗ ಅದನ್ನೆಲ್ಲಾ ಮರೆತು ಚುನಾವಣೆ ಕಾಲದಲ್ಲಿ ಬಂದು ಅದು ಇದು ಎಂದು ಮಾತನಾಡುತ್ತಿದ್ದಾರೆ. ಭಾವನಾತ್ಮಕ ವಿಷಯಗಳನ್ನು ಬಿಟ್ಟು ನೇರವಾಗಿ ಅಭಿವೃದ್ಧಿಯ ವಿಚಾರದ ಮೇಲೆ ಚುನಾವಣೆಗೆ ಬನ್ನಿ ಎಂದು ಪ್ರಿಯಾಂಕ ಸವಾಲು ಹಾಕಿದರು.

ಆಸ್ಪತ್ರೆಗಳ ಅಭಿವೃದ್ಧಿ, ಕೃಷಿಕರ ಜೀವನ ಸುಧಾರಣೆ ಬಗ್ಗೆ ಚರ್ಚೆ ಮಾಡಿ. ಒಂಬತ್ತು ವರ್ಷದಲ್ಲಿ ರಾಜ್ಯಕ್ಕೆ ಏನೇನು ಕೊಡುಗೆ ನೀಡಿದ್ದೀರಾ ಹೇಳಿ. ಮೂರು ವರ್ಷದಲ್ಲಿ ರಾಜ್ಯದಲ್ಲಿ ಜನ ಬೆಲೆ ಏರಿಕೆಯಿಂದ ಸಂಕಷ್ಟಕ್ಕೀಡಾಗಿರುವುದಕ್ಕೆ ಯಾವ ನೆರವು ನೀಡಿದ್ದೀರಾ ತಿಳಿಸಿ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರದ ಜಿಎಸ್‍ಟಿ ಪದ್ಧತಿಯಿಂದ ಸಣ್ಣ ವ್ಯಾಪಾರಿಗಳ ಬೆನ್ನು ಮೂಳೆ ಮುರಿದಿದೆ. ಜನ ಸಾಮಾನ್ಯರು ತೆರಿಗೆ ಪಾವತಿಸಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಬಗ್ಗೆ ಪ್ರಧಾನಿ ಬಾಯಿ ಬಿಡುವುದಿಲ್ಲ. ಜಾತಿ, ಧರ್ಮಗಳ ವಿಷಯಕ್ಕೆ ಮಾತ್ರ ಮಾತನಾಡುತ್ತಾರೆ. ಜನ ಸಾಮಾನ್ಯರ ಸಂಕಷ್ಟಗಳು, ನಿರುದ್ಯೋಗ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದರು.

ರಾಜ್ಯದಲ್ಲಿ ಶೇ.40ರಷ್ಟು ಕಮಿಷನ್‍ನಿಂದಾಗಿ 1.20 ಲಕ್ಷ ಕೋಟಿ ರೂ. ಲೂಟಿ ಮಾಡಲಾಗಿದೆ. ಅದನ್ನು ಊಹಿಸಲು ಸಾಧ್ಯವಿಲ್ಲ. ಅದರಲ್ಲಿ ಹತ್ತಾರು ಏಮ್ಸ್ ಆಸ್ಪತ್ರೆಗಳು, ಸಾವಿರಾರು ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ, ಎರಡು ಸಾವಿರ ಸ್ಮಾರ್ಟ್ ಕ್ಲಾಸ್ ರೂಂಗಳು, ಮೂರ ಲಕ್ಷ ಮನೆಗಳನ್ನು ನಿರ್ಮಿಸಬಹುದಿತ್ತು. ಭ್ರಷ್ಟಚಾರ ಎಲ್ಲವನ್ನೂ ಮುಳುಗಿಸಿದೆ ಎಂದು ಟೀಕಿಸಿದರು.

ಭ್ರಷ್ಟಚಾರ ತಡೆಯದವರು ಜನರಿಗೆ ಮುಖ ತೋರಿಸುವುದಾದರೂ ಹೇಗೆ? ಭ್ರಷ್ಟಚಾರದಿಂದ ಬೆಂಗಳೂರಿನಂತಹ ಪ್ರತಿಷ್ಠಿತ ನಗರದಲ್ಲಿ ಹತ್ತಾರು ಖ್ಯಾತ ಕಂಪೆನಿಗಳು ಹೊರ ನಡೆದಿವೆ. ಉದ್ಯಮಿಗಳು ಬಂಡವಾಳ ಹೂಡಿಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಸರ್ಕಾರ ಕ್ಷೀರ ಭಾಗ್ಯ ಯೋಜನೆ ತಂದು ಕೆಎಂಎಫ್ ಸಂಸ್ಥೆಯನ್ನು ಅಭಿವೃದ್ಧಿ ಪಡಿಸಲು ಯತ್ನಿಸಿತ್ತು. ಬಿಜೆಪಿ ಗುಜರಾತ್‍ನ ಅಮೂಲ್ ಉತ್ಪನ್ನಗಳನ್ನು ರಾಜ್ಯಕ್ಕೆ ತಂದು ನಂದಿನಿ ಬ್ರಾಂಡ್ ಅನ್ನು ಮುಳುಗಿಲು ಯತ್ನಿಸುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಜನ ಅವರಿಗೆ ಉತ್ತರ ನೀಡದಿದ್ದರೆ ಅವರು ಅನ್ಯಾಯ ಮಾಡುವುದನ್ನು ಮುಂದುವರೆಸುತ್ತಾರೆ.

ಚುನಾವಣೆ ವಿಷಯದಲ್ಲಿ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಮತ ಪಡೆಯುತ್ತಾರೆ. ಅಭಿವೃದ್ಧಿ ವಿಷಯವನ್ನು ಮರೆತು ಬಿಡುತ್ತಾರೆ. ಜನ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಜನ ನಿಮ್ಮ ಭವಿಷ್ಯಕ್ಕಾಗಿ, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಮತ ಹಾಕಬೇಕು ಎಂದು ಕರೆ ನೀಡಿದರು.

ಒಂಬತ್ತು ವರ್ಷದಲ್ಲಿ ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ಜನರ ಮುಂದೆ ಹೇಳಬೇಕು. ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟಿನ್ ಸೇರಿ ಅನೇಕ ಕಾರ್ಯಕ್ರಮ ಜಾರಿಗೊಳಿಸಿತ್ತು. ಬಿಜೆಪಿ ಏನು ಮಾಡಿದೆ ಹೇಳಲಿ, ಮುಂದೆ ನಮ್ಮ ಸರ್ಕಾರ ಅಕಾರಕ್ಕೆ ಬಂದರೆ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವ ನಿಗಮ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಿದೆ ಎಂದು ಹೇಳಿದರು.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

7 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

7 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

8 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

8 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

9 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

10 hours ago