ನವದೆಹಲಿ: ನಮ್ಮ ದೇಶವಾಸಿಗಳು ತಮ್ಮ ಮನೆಗಳ ಮೇಲ್ಚಾವಣಿಯ ಮೇಲೆ ಸೌರ ವ್ಯವಸ್ಥೆಯ ಹೊಂದಬೇಕೆಂಬ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ದೇಶಾದ್ಯಂತ ಒಂದು ಕೋಟಿ ಮನೆಗಳಲ್ಲಿ ರೂಫ್ಟಾಪ್ ಸೋಲಾರ ಅಳವಡಿಸುವ ಪ್ರಧಾನಮಂತ್ರಿ ʼಸೂರ್ಯೋದಯʼ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಇಂದು (ಜನವರಿ 22) ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಅವರು ಸೂರ್ಯೋದಯ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ʼಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು, ಅಯೋಧ್ಯೆಯಲ್ಲಿ ಜೀವನದ ಪವಿತ್ರೀಕರಣದ ಶುಭ ಸಂದರ್ಭದಲ್ಲಿ, ಭಾರತದ ಜನರು ತಮ್ಮ ಮನೆಗಳ ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಿದೆ ಎಂದಿದ್ದಾರೆ.
ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಪಿಎಂ ಮೋದಿ ಬರೆದುಕೊಂಡಿದ್ದಾರೆ.
ಪ್ರಧಾನಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಅಧಿಕಾರಿಗಳೊಂದಿಗೆ ಸೂರ್ಯೋದಯ ಯೋಜನೆಯ ಕುರಿತು ಚರ್ಚಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…