BREAKING NEWS

ಪ್ರಧಾನಮಂತ್ರಿ ʼಸೂರ್ಯೋದಯʼ ಯೋಜನೆ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ನಮ್ಮ ದೇಶವಾಸಿಗಳು ತಮ್ಮ ಮನೆಗಳ ಮೇಲ್ಚಾವಣಿಯ ಮೇಲೆ ಸೌರ ವ್ಯವಸ್ಥೆಯ ಹೊಂದಬೇಕೆಂಬ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ದೇಶಾದ್ಯಂತ ಒಂದು ಕೋಟಿ ಮನೆಗಳಲ್ಲಿ ರೂಫ್‌ಟಾಪ್‌ ಸೋಲಾರ ಅಳವಡಿಸುವ ಪ್ರಧಾನಮಂತ್ರಿ ʼಸೂರ್ಯೋದಯʼ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಇಂದು (ಜನವರಿ 22) ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಅವರು ಸೂರ್ಯೋದಯ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ʼಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು, ಅಯೋಧ್ಯೆಯಲ್ಲಿ ಜೀವನದ ಪವಿತ್ರೀಕರಣದ ಶುಭ ಸಂದರ್ಭದಲ್ಲಿ, ಭಾರತದ ಜನರು ತಮ್ಮ ಮನೆಗಳ ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಿದೆ ಎಂದಿದ್ದಾರೆ.

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಪಿಎಂ ಮೋದಿ ಬರೆದುಕೊಂಡಿದ್ದಾರೆ.

ಪ್ರಧಾನಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಅಧಿಕಾರಿಗಳೊಂದಿಗೆ ಸೂರ್ಯೋದಯ ಯೋಜನೆಯ ಕುರಿತು ಚರ್ಚಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

https://x.com/narendramodi/status/1749415140662055073?s=20

andolanait

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

9 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

9 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

9 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

9 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

9 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

10 hours ago