ಬೆಂಗಳೂರು : ಬೇಡಿಕೆ ಈಡೇರಿಕೆಯ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ ಹಿನ್ನೆಲೆ ಜುಲೈ 27 ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಖಾಸಗಿ ಸಾರಿಗೆ ಒಕ್ಕೂಟ ವಾಪಸ್ ಪಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ಒಕ್ಕೂಟದ ಮುಖಂಡ ನಟರಾಜ ಶರ್ಮಾ, ನಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆಗಸ್ಟ್ 10ರ ವರೆಗೆ ಕಾಲಾವಕಾಶ ನೀಡಲಾಗಿದೆ. ಬೇಡಿಕೆ ಈಡೇರಿಸಿದ್ದರೆ ಮುಂದಿನ ನಡೆ ನಿರ್ಧರಿಸುತ್ತೇವೆ ಎಂದರು.
ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಜಾರಿ ನಂತರ ಖಾಸಗಿ ಬಸ್, ಆಟೋ ಟ್ಯಾಕ್ಸಿ ಮಾಲೀಕರಿಗೆ ಭಾರೀ ಹೊಡೆತ ನೀಡಿದೆ. ಹೀಗಾಗಿ ಯೋಜನೆ ಸ್ಥಗಿತಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಆಗ್ರಹಿಸುತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆಟೋ ಚಾಲಕರ ಸಮಸ್ಯೆ ಬೇರೆ ಇದೆ, ಟ್ಯಾಕ್ಸಿ ಸಮಸ್ಯೆಯೂ ಇದೆ. ಶಕ್ತಿಯೋಜನೆ ಕುರಿತು ನಾನೊಬ್ಬನೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಬೇಕು ಎಂದರು.
ಬಂದ್ಗೆ ಕರೆ ನೀಡಿದ ಹಿನ್ನೆಲೆ ಇಂದು ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಭೆ ನಡೆಸಿದರು.
ಬೆಳಗ್ಗೆ ನಡೆದಿದ್ದ ಸಭೆಯಲ್ಲಿ ಒಮ್ಮತ ಮೂಡಿ ಬಾರದ ಹಿನ್ನೆಲೆ ಸಭೆ ವಿಫಲಗೊಂಡಿತ್ತು. ಹೀಗಾಗಿ ಮಧ್ಯಾಹ್ನದ ನಂತರ ಮತ್ತೆ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಒಕ್ಕೂಟಕ್ಕೆ ಬೇಡಿಕೆ ಈಡೇರಿಸುವ ಬಗ್ಗೆ ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ. ಹೀಗಾಗಿ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಂದ್ ವಾಪಸ್ ಪಡೆಯಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…