BREAKING NEWS

ಜು.27 ರ ಬಂದ್‌ ವಾಪಸ್‌ ಪಡೆದ ಖಾಸಗಿ ಸಾರಿಗೆ ಒಕ್ಕೂಟ: ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆ.10 ವರೆಗೆ ಗಡುವು

ಬೆಂಗಳೂರು : ಬೇಡಿಕೆ ಈಡೇರಿಕೆಯ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ ಹಿನ್ನೆಲೆ ಜುಲೈ 27 ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಖಾಸಗಿ ಸಾರಿಗೆ ಒಕ್ಕೂಟ ವಾಪಸ್ ಪಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಒಕ್ಕೂಟದ ಮುಖಂಡ ನಟರಾಜ ಶರ್ಮಾ, ನಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆಗಸ್ಟ್ 10ರ ವರೆಗೆ ಕಾಲಾವಕಾಶ ನೀಡಲಾಗಿದೆ. ಬೇಡಿಕೆ ಈಡೇರಿಸಿದ್ದರೆ ಮುಂದಿನ ನಡೆ ನಿರ್ಧರಿಸುತ್ತೇವೆ ಎಂದರು.

ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಜಾರಿ ನಂತರ ಖಾಸಗಿ ಬಸ್, ಆಟೋ ಟ್ಯಾಕ್ಸಿ ಮಾಲೀಕರಿಗೆ ಭಾರೀ ಹೊಡೆತ ನೀಡಿದೆ. ಹೀಗಾಗಿ ಯೋಜನೆ ಸ್ಥಗಿತಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಆಗ್ರಹಿಸುತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆಟೋ ಚಾಲಕರ ಸಮಸ್ಯೆ ಬೇರೆ ಇದೆ, ಟ್ಯಾಕ್ಸಿ ಸಮಸ್ಯೆಯೂ ಇದೆ. ಶಕ್ತಿಯೋಜನೆ ಕುರಿತು ನಾನೊಬ್ಬನೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಬೇಕು ಎಂದರು.

ಬಂದ್​ಗೆ ಕರೆ ನೀಡಿದ ಹಿನ್ನೆಲೆ ಇಂದು ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಭೆ ನಡೆಸಿದರು.

ಬೆಳಗ್ಗೆ ನಡೆದಿದ್ದ ಸಭೆಯಲ್ಲಿ ಒಮ್ಮತ ಮೂಡಿ ಬಾರದ ಹಿನ್ನೆಲೆ ಸಭೆ ವಿಫಲಗೊಂಡಿತ್ತು. ಹೀಗಾಗಿ ಮಧ್ಯಾಹ್ನದ ನಂತರ ಮತ್ತೆ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಒಕ್ಕೂಟಕ್ಕೆ ಬೇಡಿಕೆ ಈಡೇರಿಸುವ ಬಗ್ಗೆ ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ. ಹೀಗಾಗಿ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಂದ್ ವಾಪಸ್ ಪಡೆಯಲಾಗಿದೆ.

andolanait

Recent Posts

ಎದೆಗೆ ಗನ್‌ ಇಟ್ಟು ತಾವೇ ಶೂಟ್‌ ಮಾಡಿಕೊಂಡ ಸಿ.ಜೆ.ರಾಯ್:‌ ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

21 mins ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

22 mins ago

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

45 mins ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

1 hour ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…

1 hour ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌…

2 hours ago